ಕಾರ್ಕಳ ಜನವರಿ 05: ಉಡುಪಿ ಪರ್ಯಾಯ ಕುರಿತಂತೆ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ನಿಟ್ಟೆಯ ಸುದೀಪ್ ಶೆಟ್ಟಿ ಎಂಬಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಸುದೀಪ್ ಶೆಟ್ಟಿ ನಿಟ್ಟೆ ಎಂಬ ಹೆಸರಿರುವ ಫೇಸ್ ಬುಕ್ ಪೇಜ್ ನಲ್ಲಿ ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇರಬೇಕಾದರೆ ಈ ಸೌಹಾರ್ದ ಸಮೀತಿಯವರಿಗೆ ಎಷ್ಟೋ ಕಾರ್ಯಗಳಿವೆ ಅದನ್ನ ಬಿಟ್ಟು ಹಿಂದುಗಳ ಪರ್ಯಾಯ ಮೆರವಣಿಗೆಯಲ್ಲಿ “ಧಫ್ ದುಫ್ ಡಮ್ “ಅಂತ ಕಾರ್ಯಕ್ರಮ ಮಾಡುವ ಅಗತ್ಯವಿಲ್ಲ… ಅಷ್ಟೊಂದು ಸೌಹಾರ್ದತೆಯ ಕಾಳಜಿ ಇದ್ದಲ್ಲಿ ಲವ್ ಜಿಹಾದ್, ಗೊ ಹತ್ಯೆ, ಭಯೋತ್ಪಾದನೆ, ಹಿಂದೂ ಗಳ ಮೆರವಣಿಗೆ ಮೆಲೆ ದಾಳಿ ಮಾಡೊದು , ಆಹಾರಕ್ಕೆ ಉಗುಳೊದು, ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿ ಮಾಡೊದು, ಕಬ್ಜಾ ಮಾಡೊದು, ತಲೆ ಒಡೆಯೊದು, ಕಳ್ಳತನ ಮಾಡೊದು ಸಮಾಜದ ನೆಮ್ಮದಿ ಹಾಳು ಮಾಡೊದು ಇದನ್ನೆಲ್ಲ ಈ ಸೌಹಾರ್ದದವರು ನಿರ್ಮೂಲನೆ ಮಾಡಿ ಸಾಮಾಜಿಕ ಸ್ವಾರಸ್ಯ ಕಾಪಾಡಲಿ …. ಪರ್ಯಾಯದಲ್ಲಿ ಶರಬತ್, ನೀರಿನ ಬಾಟಲಿ ಹಂಚಿದ ಕೂಡಲೆ ಸೌಹಾರ್ದ ಬೆಳೆಯಲ್ಲ, ಇದರಿಂದ ಹಿಂದುಗಳಿಗೆ ನಂಬಿಕೆ ಏನು ನಿಮ್ಮ ಮೇಲೆ ಹೆಚ್ಚಲ್ಲ , ಎಂದು ಪೋಸ್ಟ್ ಮಾಡಿದ್ದ. ಆರೋಪಿ ಮಾಡಿರುವ ಪೋಸ್ಟ್ ಜಾತಿ, ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ಸಾಧ್ಯತೆ ಹಿನ್ನಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 01/2026 ಕಲಂ 196(1), 353(2), 352 ಭಾರತೀಯ ನ್ಯಾಯ ಸಂಹಿತೆ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.



