Connect with us

    DAKSHINA KANNADA

    ಅವಹೇಳನಕಾರಿ ಬ್ಯಾನರ್: ಆರೋಪಿಗಳ ಮೇಲೆ ಪೋಲೀಸರಿಂದ ಥರ್ಡ್ ಡಿಗ್ರಿ ಟ್ರೀಟ್ಮೆಂಟ್!

    ಪುತ್ತೂರು, ಮೇ 17: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ ವಿಚಾರವಾಗಿ ಬಂಧಿರತ ಆರೋಪಿಗಳ ಮೇಲೆ ಪೋಲಿಸರು ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

    ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ದೂರು ನೀಡಿದ್ದರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಪೋಲೀಸರು ವಶಕ್ಕೆ ಪಡೆದಿದ್ದರು. ಆರೋಪಿಗಳನ್ನು ಒಂದು ದಿನ ಪೂರ್ತಿ ಹಲ್ಲೆ ನಡೆಸಿ ಪೋಲೀಸರು ಬಿಟ್ಟಿದ್ದಾರೆಂದು ಹೇಳಲಾಗಿದೆ.

    ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ದೌರ್ಜನ್ಯ ನಡೆಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply