Connect with us

LATEST NEWS

ಪ್ರವಾದಿ ಮೊಹಮ್ಮದ್‌ ಬಗ್ಗೆ ಅವಹೇಳನ ಹೇಳಿಕೆ – ಬಿಜೆಪಿ ಶಾಸಕ ಅರೆಸ್ಟ್‌

ಹೈದರಾಬಾದ್, ಆಗಸ್ಟ್ 23: ಪ್ರವಾದಿ ಮೊಹಮ್ಮದ್‌ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ್ದಕ್ಕೆ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಶಾಸಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಭಾರಿ ಪ್ರತಿಭಟನೆ ನಡೆಸಲಾಯಿತು. ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಕಾನೂನಿನ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುವ ವೀಡಿಯೋವನ್ನು ಸಿಂಗ್ ಬಿಡುಗಡೆ ಮಾಡಿದ್ದರು. ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ಸಿಂಗ್ ಅವರು ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು. ತಕ್ಷಣ ಅವರನ್ನು ವಶಕ್ಕೆ ಪಡೆದು ನಂತರ ವಿವಿಧ ಠಾಣೆಗಳಿಗೆ ರವಾನಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *