Connect with us

    DAKSHINA KANNADA

    ಬಿಲ್ಲವ ಯುವತಿ ಮತ್ತು ಭಜನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ: ಪುತ್ತೂರು ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ

    ಪುತ್ತೂರು: ಬಿಲ್ಲವ ಯುವತಿ ಮತ್ತು ಭಜನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ವಿರೋಧಿಸಿ  ಹಿಂದೂಪರ ಸಂಘಟನೆಗಳಿಂದ ಡಿವೈಎಸ್ಪಿ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

    ಅರಣ್ಯ ಇಲಾಖೆ ಉಪ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರಿಂದ ಹಿಂದೂ ಕಾರ್ಯಕರ್ತನೋರ್ವನೊಂದಿಗೆ ಮಾತನಾಡಿದ ಅಡಿಯೋದಲ್ಲಿ ಬಿಲ್ಲವ ಯುವತಿಯರಿಗೆ ಅವಹೇಳನ ಮಾಡಿದ್ದು, ಭಜನೆಯಲ್ಲಿ ಪಾಲ್ಗೊಂಡ 1 ಲಕ್ಷ ಬಿಲ್ಲವ ಯುವತಿಯರು ವ್ಯಭಿಚಾರಿಗಳಾಗಿದ್ದಾರೆ ಎನ್ನುವ ಹೇಳಿಕೆ ನೀಡಿದ್ದಾರೆ.

    ಸಂಜೀವ ಪೂಜಾರಿಯನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಕುಳಿತ ಹಿಂದೂಪರ ಸಂಘಟನೆಗಳು ಡಿವೈಎಸ್ಪಿ ಕಛೇರಿ ಮುಂಧೆ ಭಜನೆ ಮಾಡಿ ಧರಣಿ ಮಾಡಿದೆ.

    ಅಷ್ಟೇ ಅಲ್ಲದೇ ಸಂಜೀವ ಪೂಜಾರಿ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಿರುವ ಬೆಳ್ಳಾರೆ ಪೋಲೀಸರು ಎಫ್ಐಆರ್ ನಲ್ಲಿ ಕ್ಷುಲ್ಲಕ ಸೆಕ್ಷನ್ ಹಾಕಿದ್ದಾರೆಂದು ಹಿಂದೂ ಸಂಘಟನೆಗಳ ಆರೋಪ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply