BELTHANGADI
ಈ ಬಾರಿ ಸರಳವಾಗಿ ನಡೆಯಲಿರುವ ಧರ್ಮಸ್ಥಳ ಲಕ್ಷದೀಪೋತ್ಸವ
ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಕಾರ್ಯಕ್ರಮಗಳನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ಡಿಸೆಂಬರ್ 10 ರಿಂದ 14 ರವರೆಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಡಿಸೆಂಬರ್ 13 ರಂದು ಸರ್ವಧರ್ಮ ಸಮ್ಮೇಳನ ಮತ್ತು ಡಿಸೆಂಬರ್ 14 ರಂದು ಸಾಹಿತ್ಯ ಸಮ್ಮೇಳನವನ್ನು ಸರಳ ಮತ್ತು ಸಾಂಕೇತಿಕವಾಗಿ ಆಯೋಜಿಸಲಾಗಿದೆ. ಡಿಸೆಂಬರ್ 14 ರಂದು ಲಕ್ಷದೀಪೋತ್ಸವ ನಡೆಯಲಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿ ಭಕ್ತಾದಿಗಳು ಮನೆಯಲ್ಲೇ ಕುಳಿತು ಕಾರ್ಯಕ್ರಮಗಳನ್ನು ವೀಕ್ಷಿಸುವ ಸೌಲಭ್ಯ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
You must be logged in to post a comment Login