LATEST NEWS
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕ್ಕೆ ಉತ್ತರ ನೀಡಲು ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ಸ್ಥಾಪನೆ
ಮಂಗಳೂರು ಅಗಸ್ಟ್ 03 : ಸೌಜನ್ಯ ಪ್ರಕರಣವನ್ನು ಇಟ್ಟುಕೊಂಡು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ನಡೆಯುತ್ತಿರುವ ಅವಹೇಳನ ವಿರುದ್ದ ಜನತಾ ಚಳವಳಿ ನಡೆಸಲು ಭಕ್ತರು ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ ಸ್ಥಾಪನೆ ಮಾಡಿದ್ದಾರೆ.
ಧರ್ಮಸ್ಥಳ ಕ್ಷೇತ್ರವನ್ನು ಗುರಿಯಾಗಿಸಿ ನಡೆಸುತ್ತಿರುವ ಅಪಪ್ರಚಾರ ಜನರಲ್ಲಿ ಆಘಾತ ಮೂಡಿಸಿದ್ದು, ಸಂಘಟನೆಯ ನೇತೃತ್ವದಲ್ಲಿ ಆಗಸ್ಟ್ 4ರಂದು ಬೆಳಿಗ್ಗೆ 10 ಗಂಟೆಗೆ ಉಜಿರೆ ಜನಾರ್ದನ ಸ್ವಾಮಿ ರಥಬೀದಿಯಲ್ಲಿ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ. ಜತೆಗೆ, ಸುಳ್ಳು ಸುದ್ದಿಗಳ ವಿರುದ್ಧ ಜನತಾ ಚಳವಳಿ ನಡೆಸಲು ನಿರ್ಧರಿಸಲಾಗಿದೆ’ ಎಂದು ಸಂಘಟನೆಯ ಪರವಾಗಿ ಡಾ. ಎಲ್.ಎಚ್.ಮಂಜುನಾಥ್ ತಿಳಿಸಿದ್ದಾರೆ.
You must be logged in to post a comment Login