Connect with us

    BELTHANGADI

    ಡಿಸೆಂಬರ್ 10 ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ

    ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 10ರಿಂದ 14ರವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು. ಜೊತೆಗೆ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 88ನೇ ಅಧಿವೇಶನ ಜರುಗಲಿದೆ.


    ಕೊರೊನಾ ನಡುವೆ ಈ ಬಾರಿ ಧರ್ಮಸ್ಥಳದಲ್ಲಿ ಸರಳವಾಗಿ ಲಕ್ಷದೀಪೋತ್ಸವ ನಡೆಸಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಡಿಸಂಬರ್ 10ರಂದು ರಾತ್ರಿ 9ಕ್ಕೆ ಹೊಸಕಟ್ಟೆ ಉತ್ಸವ, 11ರಂದು ಕೆರೆಕಟ್ಟೆ ಉತ್ಸವ, 12ರಂದು ಲಲಿತೋದ್ಯಾನ ಉತ್ಸವ, 13ರಂದು ಕಂಚಿಮಾರುಕಟ್ಟೆ ಉತ್ಸವ, 14ರಂದು ಗೌರಿಮಾರುಕಟ್ಟೆ ಉತ್ಸವಗಳು ನೆರವೇರಲಿವೆ.


    ಶ್ರೀಕ್ಷೇತ್ರದಲ್ಲಿ ನಡೆಯುವ ಎಲ್ಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಮ್ಮ ಕುಡ್ಲ, ಶ್ರೀಶಂಕರ ಟಿವಿ, ಯೂಟ್ಯೂಬ್​ ಮತ್ತು ಫೇಸ್​ಬುಕ್​ಗಳಲ್ಲಿ ನೇರ ವೀಕ್ಷಣೆ ಮಾಡಬಹುದು ಎಂದು ಆಡಳಿತ ಮಂಡಳಿ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply