LATEST NEWS
ತಾಯಿಯನ್ನು ಎಂದಾದರೂ ಬಿಟ್ಟು ಕೊಡಲಿಕ್ಕಾಗುತ್ತದೆಯೇ – ಸುಮಲತಾ ಬಗ್ಗೆ ದರ್ಶನ್ ಮಾತು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಉಳ್ಳಾಲ ಮಾರ್ಚ್ 10: ಕನ್ನಡದ ಖ್ಯಾತ ನಟ ದರ್ಶನ ಇಂದು ಕೊರಗಜ್ಜನ ಆದಿ ಸ್ಥಳ ಕುತ್ತಾರು ದೆಕ್ಕಾಡುವಿಗೆ ಆಗಮಿಸಿ ಕೊರಗಜ್ಜನ ದರ್ಶನ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮಂಗಳೂರಿಗೆ ಸುಮಾರು ಸಲ ಬಂದಿದ್ದೇನೆ. ಆದರೆ ಕುತ್ತಾರಿಗೆ ಬರುವುದಕ್ಕೆ ಆಗಿರಲಿಲ್ಲ. ಈ ಕ್ಷೇತ್ರದ ಬಗ್ಗೆ ಅನೇಕರು ಹೇಳುತ್ತಿದ್ದರು. ಹಾಗಾಗಿ ಭೇಟಿ ನೀಡಿ ಪ್ರಾರ್ಥಿಸಿದ್ದೇನೆ ಎಂದರು. ಈ ವೇಳೆ ಮಾಧ್ಯಮದವರು ಸಂಸದೆ ಸುಮಲತಾ ಚುನಾವಣೆಗೆ ಸ್ಪರ್ಧಿಸಿದರೆ, ಅವರ ಪರ ಪ್ರಚಾರ ಕೈಗೊಳ್ಳುವ ಕುರಿತ ಪ್ರಶ್ನೆಗೆ, ‘ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟು ಕೊಡಲಿಕ್ಕಾಗುತ್ತದೆಯೇ’ ಎಂದು ಪ್ರತಿಕ್ರಿಯಿಸಿದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಮೊನ್ನೆಯವರೆಗೂ ಸುಮಲತಾ ಅಮ್ಮನ ಜೊತೆ ಇದ್ದೆ , ಈಗ ಅವರ ಕೈ ಬಿಟ್ಟರೆ ಆಗುತ್ತದೆಯೇ ಸರ್. ನಿಮ್ಮ ಮನೆಯಲ್ಲಿ ನಿಮ್ಮ ತಾಯಿಯನ್ಬು ಬಿಟ್ಟು ಬಿಡುತ್ತೀರಾ. ಸುಮಲತಾ ಅಮ್ಮ ಅಮ್ಮನೇ ಸಾರ್’ ಎಂದಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ, ಪ್ರಶಾಂತ್ ಮಾರ್ಲ, ಮಹಾಬಲ ಶೆಟ್ಟಿ, ವಿದ್ಯಾಚರಣ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಪ್ರೀತಮ್ ಶೆಟ್ಟಿ ಹಾಗೂ ದೆಕ್ಕಾಡು ಕೊರಗಜ್ಜ ಆದಿಸ್ಥಳದ ಟ್ರಸ್ಟಿಗಳು ಇದ್ದರು.
You must be logged in to post a comment Login