Connect with us

    FILM

    ಸಾಲ ತೀರಿಸಲಾಗದೆ ಖ್ಯಾತ ನೃತ್ಯ ನಿರ್ದೇಶಕ ನೇಣಿಗೆ ಶರಣು….!!

    ಆಂಧ್ರ ಪ್ರದೇಶ ಮೇ 01: ತಾನು ಮಾಡಿರುವ ಸಾಲ ತೀರಿಸಲಾಗದ ಹಿನ್ನಲೆ ತೆಲುಗು ಸಿನಿಮಾ ರಂಗದ ಖ್ಯಾತ ಕೋರಿಯೊಗ್ರಾಫರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


    ಮೃತರನ್ನು ಖ್ಯಾತ ಕೋರಿಯೋಗ್ರಾಫರ್ ಚೈತನ್ಯ ಎಂದು ಗುರುತಿಸಲಾಗಿದ್ದು, ಇವರು ತೆಲುಗಿನ ಜನಪ್ರಿಯ ಡ್ಯಾನ್ಸ್ ಶೋ ‘ಧೀ’ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದು, ಪ್ರಭುದೇವ ಸೇರಿದಂತೆ ಹಲವರೊಂದಿಗೆ ಕೆಲಸ ಮಾಡಿದ್ದಾರೆ. ಅಲ್ಲದೇ, ಅನೇಕ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿಯೂ ಕೆಲಸ ಮಾಡಿದ್ದಾರೆ.


    ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಅವರು ವಾಸವಿದ್ದು, ಸಾಯುವುದಕ್ಕೂ ಮುನ್ನ ವಿಡಿಯೋವೊಂದನ್ನು ಮಾಡಿದ್ದಾರೆ. ‘ನನ್ನ ತಂದೆ ತಾಯಿ ಹಾಗೂ ಸಹೋದರಿ ಚೆನ್ನಾಗಿ ನೋಡಿಕೊಂಡರು. ಆದರೆ, ನಾನು ಅನಿವಾರ್ಯ ಕಾರಣಗಳಿಂದಾಗಿ ಸಾಲ ಮಾಡಿಕೊಂಡೆ. ಅದನ್ನು ತೀರಿಸಲು ಕಷ್ಟವಾಯಿತು. ಹಾಗಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದೇನೆ. ನೆಲ್ಲೂರಿನಲ್ಲಿ ಇಂದು ನನ್ನ ಕೊನೆಯ ದಿನ’ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply