ಮಂಗಳೂರು ಮೇ 08 : “ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷ ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುತ್ತಿದೆ” ಎಂಬ ಚಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಇಂತಹ ಹೇಳಿಕೆಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.

ಅಲ್ಲಿ ಜಾತ್ಯಾತೀತ ಸರ್ಕಾರ ರಚನೆಯಾಗಬೇಕು ಮತ್ತು ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ. ನಟ ವಿಜಯ್ ಅವರು ಪ್ರಗತಿಪರ ಚಿಂತಕ ಮತ್ತು ಜಾತ್ಯಾತೀತ ಮನೋಭಾವದವರಾಗಿದ್ದು, ರಾಹುಲ್ ಗಾಂಧಿ ಅವರೊಂದಿಗೆ ಮೊದಲಿನಿಂದಲೂ ಉತ್ತಮ ಸ್ನೇಹ ಹಾಗೂ ಸಂಪರ್ಕ ಹೊಂದಿದ್ದಾರೆ. ಸುಮಾರು ಎಂಟು ವರ್ಷಗಳ ಹಿಂದೆಯೇ ವಿಜಯ್ ಅವರು ನಮ್ಮ ಪಕ್ಷದ ವಿದ್ಯಾರ್ಥಿ ಘಟಕವಾದ NSUI ಸೇರಬೇಕು ಎಂಬ ಮಾತುಕತೆ ನಡೆದಿತ್ತು ಎಂದು ಈ ಸಂದರ್ಭದಲ್ಲಿ ಅವರು ಬಹಿರಂಗಪಡಿಸಿದರು.
ಇದೇ ವೇಳೆ ಬಿಜೆಪಿಯ ಅಧಿಕಾರ ಧೋರಣೆಯನ್ನು ಟೀಕಿಸಿದ ಅವರು, ಬಂಗಾಳದಲ್ಲಿ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ಎದುರಿಸಿದೆ. ಇಂತಹ ಶಕ್ತಿಗಳ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯತೆ ಇರುವುದರಿಂದಲೇ ರಾಜಕೀಯವಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.