FILM
ನಟಿ ರಚಿತಾ ರಾಮ್ ವಿರುದ್ಧ ತಿರುಗಿ ಬಿದ್ದ ನಿರ್ದೇಶಕ ನಾಗಶೇಖರ್: ಕಠಿಣ ಕ್ರಮಕ್ಕೆ ಒತ್ತಾಯ

ಬೆಂಗಳೂರು, ಜೂನ್ 17: ನಟಿ ರಚಿತಾ ರಾಮ್ ವಿರುದ್ಧ ಕಲಾವಿದರ ಸಂಘ ಮತ್ತು ಫಿಲ್ಮ್ ಚೇಂಬರ್ ಕಠಿಣ ಕ್ರಮ ತಗೆದುಕೊಳ್ಳಬೇಕು ಅಂತ ಸಂಜು ವೆಡ್ಸ್ ಗೀತಾ 2 ಸಿನಿಮಾದ ನಿರ್ದೇಶಕ ನಾಗಶೇಖರ್ ಒತ್ತಾಯಿಸಿದ್ದಾರೆ.
ಸಿನಿಮಾ ಟೀಮ್ ಜೊತೆ ಮಂಗಳವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಆಗಮಿಸಿದ್ದ ನಾಗಶೇಖರ್, ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ಸಲ್ಲಿಸಿದರು. ರಚಿತಾರಿಂದ ಆದ ತೊಂದರೆಯನ್ನು ಹಂಚಿಕೊಂಡರು.

ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ. ಹಾಗಾಗಿ ನಟಿಯ ನಡೆಯ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದ್ದು ನಾವು ಇಂತಹ ಕಲಾವಿದರಿಗೆ ಕಠಿಣ ಕ್ರಮ ತೆಗೆದುಕೊಳ್ಬೇಕು ಅಂತ ಆಗ್ರಹಿಸುತ್ತೇವೆ ಎಂದಿದ್ದಾರೆ.
ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಕಾಂಬಿನೇಷನ್ ನಲ್ಲಿ ಸಂಜು ವೆಡ್ಸ್ ಗೀತಾ 2 ಸಿನಿಮಾ ಮೂಡಿ ಬಂದಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಛಲವಾದಿ ಕುಮಾರ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿದ್ದಾರೆ.