ಮಂಗಳೂರು ಜುಲೈ 01: ನಾಗೂರಿಯಲ್ಲಿ ಮನೆಯ ಮೇಲೆ ಕಂಪೌಂಡ್ ವಾಲ್ ಕುಸಿದು ಮೂವರು ಸಾವನ್ನಪ್ಪಿದ ಘಟನೆಯ ಹಿನ್ನಲೆಯಲ್ಲಿ ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಯು ಟಿ ಖಾದರ್ ಅವರು ತಮ್ಮ ಭೇಟಿಯನ್ನು ಮೊಟಕುಗೊಳಿಸಿದ್ದಾರೆ. ದುರಂತಕ್ಕೆ ಸಚಿವ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಸಚಿವರು, ತ್ವರಿತ ಪರಿಹಾರ ಕ್ರಮಗಳಿಗೆ ಸೂಚಿಸಿದರು. ಗಾಯಾಳುಗಳಿಗೆ ಸರಕಾರದ ವತಿಯಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸಾ ವೆಚ್ಚ ಭರಿಸಲು ಹಾಗೂ ಮೃತರ ಕುಟುಂಬದವರಿಗೆ ಇಂದೇ ಪರಿಹಾರ ಮೊತ್ತ ನೀಡಲು ಅವರು ನಿರ್ದೇಶಿಸಿದ್ದಾರೆ.