ಮಂಗಳೂರು : ‘ಕಾಂತಾರ’ ಸಿನಿಮಾ ಮೂಲಕ ಸುದ್ದಿ ಮಾಡಿದ್ದ ಡಿವೈನದ ಸ್ಟಾರ್ ರಿಷಬ್ ಶೆಟ್ಟಿ ಕಾಂತಾರ 2 ಸಿನಿಮಾದ ಮೂಲಕ ಇದೀಗ ಮತ್ತೊಮ್ಮೆ ಸುದ್ದಿ ಮಾಡುತ್ತಿದ್ದಾರೆ. ಕೇವಲ ನಟ ಮಾತ್ರ ಅಲ್ಲ ಹಿಂದೂ ಧಾರ್ಮಿಕ ಆಚರಣೆಗಳ ಮೇಲೆ, ತುಳು ನಾಡಿನ ಸಂಸ್ಕೃತಿ ಮೇಲೆ ಅಪಾರ ನಂಬಿಕೆ ಕೂಡ ಇಟ್ಟಿದ್ದಾರೆ.

ಅಲ್ಲದೆ ಅದರಲ್ಲಿ ಬಹುತೇಕ ಅಂಶಗಳನ್ನು ತನ್ನ ಜೀವನದಲ್ಲಿ ಅಳವಡಿಸಿ ಮಾದರಿಯಾಗಿದ್ದಾರೆ. ಇತ್ತೀಚೆಗೆ ಮಂಗಳೂರು ಹೊರ ವಲಯದ ಗುರುಪುರ ವಜ್ರದೇಹಿ ಮಠದ ದೈವ ಸನ್ನಿಧಿಯಲ್ಲಿ ನಡೆದ ನೇಮೋತ್ಸವದಲ್ಲಿ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಕುಟುಂಬ ಭಾಗಿಯಾಗಿ ದೈವದ ಆಶೀರ್ವಾದ ಪಡೆದಿದ್ದಾರೆ. ‘ದೈವದ ಸನ್ನಿದಿಯಲ್ಲಿ, ಆಶೀರ್ವಾದ ಪಡೆದ ಕ್ಷಣಗಳು…’ ಎಂಬ ಶೀರ್ಷಿಕೆಯಡಿ ಈ ವಿಡಿಯೋ ಕೂಡ ಹಂಚಿಕೊಂಡಿದ್ದಾರೆ. ಗಿದ್ದರು. ನಟನ ಕೈ ಹಿಡಿದು ಆಶೀರ್ವಾದ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.