Connect with us

LATEST NEWS

ಮಂಗಳೂರು – ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಡಿಜೆ ಸಜಂಕಾ ಕಾರ್ಯಕ್ರಮ ರದ್ದು

ಮಂಗಳೂರು ಡಿಸೆಂಬರ್ 27: ಇಸ್ರೇಲ್ ಮೂಲದ ಪ್ರಖ್ಯಾತ ಡಿಜೆ ಸಜಂಕಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಡಿಜೆ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕೊನೆ ಕ್ಷಣದಲ್ಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಇದರಿಂದಾಗಿ ಮಂಗಳೂರಿನ ಬೋಳಾರದ ಸಿಟಿ ಬೀಚ್‌ನಲ್ಲಿ ಇಂದು ಸಂಜೆ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿದೆ.


ಜಗತ್ತಿನ ಪ್ರಖ್ಯಾತ ಸಂಗೀತಗಾರ ಡಿಜೆ ಸಜಂಕಾ ಕಾರ್ಯಕ್ರಮ ಮಂಗಳೂರಿನ ಸಿಟಿ ಬೀಚ್ ನಲ್ಲಿ ಇಂದು ಆಯೋಜಿಸಲಾಗಿತ್ತು. ಆದರೆ ಡಿಜೆ ಸಜಂಕಾ ವಿರುದ್ದ ಹಿಂದೂ ಸಂಘಟನೆಗಳು ಹಿಂದೂ ದೇವರ ಅವಹೇಳನ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ಪ್ರಚಾರ ಎಂದು ಆರೋಪಿಸಿದ್ದವು. ಸಜಂಕಾ ಡಿಜೆ ಕಾರ್ಯಕ್ರಮದಲ್ಲಿ ಹಿಂದೂ ದೇವರ ಶ್ಲೋಕ, ಮಂತ್ರ, ಗಾಯತ್ರಿ ಮಂತ್ರ, ವಿಷ್ಣು ಸಹಸ್ರನಾಮ ಹಾಗೂ ದುರ್ಗಾ ಸಪ್ತಶತಿ ಮಂತ್ರಗಳನ್ನು ವಿಡಂಬನೆಯ ರೂಪದಲ್ಲಿ ಬಳಸಲಾಗುತ್ತಿದೆ.

ಬಜರಂಗದಳ ಮತ್ತು ಹಿಂದೂ ಜಾಗರಣಾ ವೇದಿಕೆ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪೊಲೀಸರಲ್ಲಿ ಮನವಿ ಮಾಡಿದ್ದು, ಕಾರ್ಯಕ್ರಮ ನಡೆದರೆ ಅದೇ ಸ್ಥಳದಲ್ಲಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದವು. ಇನ್ನು ಈ ಕಾರ್ಯಕ್ರಮಕ್ಕೆ ಈಗಾಗಲೇ ಟಿಕೆಟ್ ಮಾರಾಟ ಪ್ರಕ್ರಿಯೆ ಪೂರ್ಣಗೊಂಡಿತ್ತು. ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಹಿಂದೂ ಸಂಘಟನೆಗಳ ಪ್ರತಿಭಟನೆಯ ಎಚ್ಚರಿಕೆ ಬೆನ್ನಲ್ಲೇ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಇನ್ನು ಡಿಜೆ ಸಜಂಕಾ ಈಗಾಗಲೇ ಮಂಗಳೂರಿಗೆ ಆಗಮಿಸಿದ್ದು, ರದ್ದಾದ ಹಿನ್ನೆಲೆ ವಾಪಸ್ ತೆರಳಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *