Connect with us

    LATEST NEWS

    ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರ 10 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ

    ಮಂಗಳೂರು ಎಪ್ರಿಲ್ 5: ಲೋಕಸಭೆಯ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪೂರ್ಣಗೊಂಡು, ಅವುಗಳ ಪರಿಶೀಲನೆ ಎಪ್ರಿಲ್ 5ರ ಶುಕ್ರವಾರ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ನಡೆಯಿತು. ಕ್ರಮಬದ್ದವಾಗಿ ನಾಮ ನಿರ್ದೇಶಿತರಾದ ಅಭ್ಯರ್ಥಿಗಳ ಪಟ್ಟಿ ಇಂತಿದೆ:


    ಬಹುಜನ್ ಸಮಾಜ ಪಾರ್ಟಿಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ, ಕರುನಾಡ ಸೇವಕ ಪಕ್ಷದ ಅಭ್ಯರ್ಥಿ ದುರ್ಗಾ ಪ್ರಸಾದ್, ಉತ್ತಮ ಪ್ರಜಾಕೀಯ ಪಾರ್ಟಿಯ ಅಭ್ಯರ್ಥಿ ಪ್ರಜಾಕೀಯ ಮನೋಹರ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಎಂ., ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ದೀಪಕ್ ರಾಜೇಶ್ ಕುವೆಲ್ಲೊ, ಮ್ಯಾಕ್ಸಿಮ್ ಪಿಂಟೋ, ಸತೀಶ್ ಬೂಡುಮಕ್ಕಿ ಹಾಗೂ ಸುಪ್ರೀತ್ ಕುಮಾರ್ ಪೂಜಾರಿ ಕಟೀಲು ಅವರ ನಾಮಪತ್ರಗಳು ಕ್ರಮಬದ್ದವಾಗಿವೆ ಎಂದು 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply