Connect with us

    KARNATAKA

    ಸರಳವಾಗಿ ನಡೆಯಿತು ಡಿಕೆಶಿ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ….!!

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ ಅವರ ಹಿರಿಯ ಪುತ್ರ ಅಮರ್ಥ್ಯ ಜೊತೆ ಮದುವೆ ನಿಶ್ಚಯವಾಗಿದೆ. ಸೋಮವಾರ ಡಿಕೆಶಿ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಹಾರ ಬದಲಿಸಿಕೊಳ್ಳುವ ಮೂಲಕ ಮದುವೆ ನಿಶ್ಚಯ ಮಾಡಿಕೊಳ್ಳಲಾಗಿದೆ.


    ಡಿ.ಕೆ ಶಿವಕುಮಾರ್ ಹಾಗೂ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮೀಯ ಸ್ನೇಹಿತರು ಮಾತ್ರವಲ್ಲ, ಉದ್ಯಮದಲ್ಲಿ ಪಾಲುದಾರರು ಕೂಡ ಆಗಿದ್ದರು. ಅಲ್ಲದೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಡಿಕೆಶಿ ಗೆ ರಾಜಕೀಯ ಗುರುವಾಗಿದ್ದವರು ಈ ಹಿನ್ನಲೆ ಎಸ್ಎಂ ಕೃಷ್ಣ ಅವರ ಮೊಮ್ಮಗನೊಂದಿಗೆ ಶಿವಕುಮಾರ್ ಪುತ್ರಿ ವಿವಾಹ ನಿಶ್ಚಯವಾಗಿದೆ. ನಿನ್ನೆ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿಯೇ ಐಶ್ವರ್ಯಾ ನಿಶ್ಚಿತಾರ್ಥ ಸರಳವಾಗಿ ನಡೆದಿದೆ.


    ಇದೇ ತಿಂಗಳ 12ರಂದು ಡಿ.ಕೆ.ಶಿವಕುಮಾರ್ ಕುಟುಂಬದವರು ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸಕ್ಕೆ ತೆರಳಿ ಮದುವೆ ಮಾತುಕತೆ ನಡೆಸಿದ್ದರು. ಕಳೆದ ಒಂದು ತಿಂಗಳಿಂದಲೂ ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಅಮರ್ಥ್ಯ ಸುಬ್ರಮಣ್ಯ ವಿವಾಹ ಸಂಬಂಧ ಎರಡು ಕುಟುಂಬಗಳು ಮಾತುಕತೆ ನಡೆಸುತ್ತಲೇ ಇದ್ದವು. ಆದರೆ ಇಂದು ಡಿಕೆಶಿ ನಿವಾಸದಲ್ಲೇ ಸರಳ ಕಾರ್ಯಕ್ರಮದಲ್ಲಿ ಹಾರವನ್ನು ಬದಲಿಸುವ ಮೂಲಕ ಮದುವೆ ನಿಶ್ಚಯ ಮಾಡಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply