Connect with us

    LATEST NEWS

    ರಾಜ್ಯದ ನೂತನ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಅಭಿನಂದನೆ ತಿಳಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

    ಉಡುಪಿ ಜುಲೈ 06: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ಆಯ್ಕೆಯಾದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.


    ಉಡುಪಿ ಪ್ರವಾಸದಲ್ಲಿರುವ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯದ ಹೊಸ ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ಗಮಿತ ರಾಜ್ಯಪಾಲರು ತಮ್ಮ ಕೈಲಾದ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ನಮಗೆ ಸಾಕಷ್ಟು ಭಿನ್ನಾಭಿಪ್ರಾಯ ಇರಬಹುದು ಆದರೆ ಭೇಟಿ ಮಾಡಲು ಬಯಸಿದಾಗಲೆಲ್ಲ ನಮ್ಮನ್ನು ಅವರು ಕರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಜೊತೆ ಚರ್ಚೆ ಮಾಡಿದ್ದಾರೆ ಎಂದರು.


    ಕೆಆರ್ ಎಸ್ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ನಡುವಿನ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು ನನಗೆ ಕುಮಾರಸ್ವಾಮಿ ಸುದ್ದಿನೂ ಬೇಡ ಸುಮಲತಾ ಸುದ್ದಿನೂ ಬೇಡ ,ನಮ್ಮ ಗಮನ ಇರುವುದು ಮೇಕೆದಾಟು ವಿಚಾರದಲ್ಲಿ , ಮುಖ್ಯಮಂತ್ರಿಗಳು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಗೆ ಪತ್ರ ಬರೆದಿರುವುದು ಸರಿಯಲ್ಲ. ಮೊದಲು ಟೆಂಡರ್ ಕರೆದು ಮೇಕೆದಾಟು ಡ್ಯಾಮ್ ಕಟ್ಟುವ ಕೆಲಸ ಮಾಡಿ, ಡ್ಯಾಮ್ ವಿಚಾರದಲ್ಲಿ ಏರುಪೇರು ಇದ್ದರೆ, ಅದಕ್ಕೊಂದು ತಂಡ ಇದ್ದು, ತಂಡದ ಮೂಲಕ ಸಮಸ್ಯೆಯನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply