Connect with us

    LATEST NEWS

    ಸಿಎಂ ಮೇಲೆ ಸಾರ್ವಜನಿಕರ ದಾಳಿ – ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೆ ಗೊತ್ತಿಲ್ಲ – ಗೃಹಸಚಿವ ಬಸವರಾಜ್ ಬೊಮ್ಮಾಯಿ

    ಉಡಪಿ ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಗೃಹಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೆ ಗೊತ್ತಿಲ್ಲ, ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ ಎಂದು ತಿಳಿಸಿದ್ದಾರೆ.


    ಉಡುಪಿ ಜಿಲ್ಲೆ ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ಸಂದರ್ಭ ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದು, ಯಡಿಯೂರಪ್ಪ ಜನರಿಂದ ಜನರ ಮಧ್ಯದಿಂದ ಬಂದವರು, ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು, ಯಡಿಯೂರಪ್ಪ ಯಾವತ್ತು ಜನರ ಜೊತೆಗೆ ಇರುವವರು ಜನರ ಮಧ್ಯೆ ಹೋಗಲು ಸಿಎಂಗೆ ಯಾವುದೇ ತೊಂದರೆ ಇಲ್ಲ, ಆತಂಕಗಳು ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದರು.

    ಇನ್ನು ಜಾರಕಿಹೊಳಿ ಮುಂಬೈ ಪ್ರವಾಸ ವಿಚಾರದ ಬಗ್ಗೆ ಯಾವುದೇ ಮಾಹಿತಿ ಇಲ್ಲ, ಮಾಹಿತಿ ಇಲ್ಲದಿರುವುದರಿಂದ ನಾನು ಏನೂ ಮಾತನಾಡುವುದಿಲ್ಲ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply