Connect with us

LATEST NEWS

ಮಾನವ ಜೀವಿ ಕೊನೆಯಾಗುವವರೆಗೂ ಅವರೇ ಅಧಿಕಾರದಲ್ಲಿ ಇರಲಿ – ಡಿಕೆ ಶಿವಕುಮಾರ್

ಮಂಗಳೂರು ನವೆಂಬರ್ 12: ಇನ್ನು ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.


ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳೋದೆಲ್ಲಾ ಸುಳ್ಳಿನ ಕಂತೆಯಾಗಿದ್ದು, ಅವರ ಪಕ್ಷ ಅಧಿಕಾರದಲ್ಲಿ 10 ವರ್ಷಕ್ಕೆ ಮಾತ್ರ ಸೀಮಿತವಾಗೋದು ಬೇಡ, 100 ವರ್ಷ ಮತ್ತು ಮಾನವ ಜೀವಿ ಕೊನೆಯಾಗುವವರೆಗೂ ಅವರ ಪಾರ್ಟಿಯೆ ಅಧಿಕಾರದಲ್ಲಿ ಇರಲಿ ಎಂದು ನಳಿನ್ ಗೆ ಟಾಂಗ್ ನೀಡಿದ್ದಾರೆ.
ಉಪಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿರುವ ಬಗ್ಗೆ ಚರ್ಚೆ ಮಾಡಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಸೋಲಾಗಿದ್ದು, ಉಪಚುನಾವಣೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಮಾಹಿತಿ ಇದ್ದು , ಈ ಕುರಿತಂತೆ ಚರ್ಚೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ವಿದ್ಯಾವಂತರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು ಹೇಳಿದ್ದಾರೆ. ಮತದಾರ ಹೇಳಿದ್ದು ತಪ್ಪಿದೆಯಾ, ಮತ ಬಿದ್ದಿರೋದು ತಪ್ಪಿದೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *