Connect with us

LATEST NEWS

ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದಕ್ಕೆ ಶೀಘ್ರವೇ ಪಶ್ಚಾತ್ತಾಪ ಪಡಲಿದ್ದಾರೆ – ಡಿಕೆಶಿ

ಉಡುಪಿ ಮೇ 20: ಪ್ರಮೋದ್ ಮಧ್ವರಾಜ್ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರಿ ಅವರಿಗೆ ನೀಡಿರುವ ಸ್ಥಾನಮಾನ ನೋಡಿದರೆ ಮನಸ್ಸಿಗೆ ಬೇಜಾರಾಗುತ್ತದೆ. ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರಿದ್ದಕ್ಕೆ ಶೀಘ್ರವೇ ಪಶ್ಚಾತ್ತಾಪ ಪಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


ಉಡುಪಿಯಲ್ಲಿ ಮಾತನಾಡಿದ ಅವರು ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತ್ಯಜಿಸಿದರೂ ಒಬ್ಬ ಕಾರ್ಯಕರ್ತ ಕೂಡ ಪಕ್ಷ ತೊರೆಯಲಿಲ್ಲ. ಪಕ್ಷದ ಜತೆ ದೃಢವಾಗಿ ನಿಂತ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ ಎಂದರು. ಕಾಂಗ್ರೆಸ್‌ ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ. ಪಕ್ಷದ ನಾಯಕತ್ವ ಹಾಗೂ ಕಾರ್ಯಕ್ರಮಗಳ ಮೇಲೆ ನಂಬಿಕೆ ಇದ್ದವರು ಪಕ್ಷದಲ್ಲಿ ಉಳಿಯಬಹುದು. ಬ್ಲಾಕ್‌ಮೇಲ್‌ ಮಾಡುವ ನಾಯಕರು ಮುಂದಿನ ದಾರಿ ನೋಡಿಕೊಳ್ಳಲಿ ಎಂದು ಕಾಂಗ್ರೆಸ್‌ ತೊರೆಯಲು ಸಿದ್ಧರಾಗಿರುವ ಮುಖಂಡರಿಗೆ ಡಿ.ಕೆ.ಶಿವಕುಮಾರ್ ಬಿಸಿ ಮುಟ್ಟಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *