Connect with us

    FILM

    ನಾಯಿ ಕಚ್ಚಿದ ಪ್ರಕರಣ: ವಿಚಾರಣೆಗೆ ಪೊಲೀಸ್ ಠಾಣೆಗೆ ಹಾಜರಾದ ನಟ ದರ್ಶನ್..!

    ಬೆಂಗಳೂರು : ಅಕ್ಟೋಬರ್ 28ರಂದು ಬೆಂಗಳೂರಿನ ಆರ್‌ ಆರ್‌ ನಗರದ ದರ್ಶನ್‌ ನಿವಾಸದ ಪಕ್ಕದ ಖಾಲಿ ಜಾಗದಲ್ಲಿ ಎರಡು ನಾಯಿಗಳು  ದೂರುದಾರೆ ಅಮಿತಾ ಎಂಬವರಿಗೆ ಕಚ್ಚಿ ಗಾಯಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್‌ ಅವರು ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

    ನಟ ದರ್ಶನ್ ನಾಯಿ ಕಚ್ಚಿದ ಪ್ರಕರಣದ 2ನೇ ಆರೋಪಿಯನ್ನಾಗಿ ಪೊಲೀಸರು ಪರಿಗಣಿಸಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಿ ಎಂದು ದರ್ಶನ್ ಗೆ ನೋಟಿಸ್ ಜಾರಿ ಮಾಡಿದ್ದರು.

     

    ಐಪಿಸಿ ಸೆಕ್ಷನ್ 289ರಡಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ಮುಂದೆ ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply