Connect with us

LATEST NEWS

ಕಾಟಾಚಾರದ ಭದ್ರತೆ ಬೇಕಿಲ್ಲ- ಯು.ಟಿ ಖಾದರ್

ಕಾಟಾಚಾರದ ಭದ್ರತೆ ಬೇಕಿಲ್ಲ- ಯು.ಟಿ ಖಾದರ್

ಮಂಗಳೂರು ಮಾ.6: ದಕ್ಷಿಣಕನ್ನಡ ಜಿಲ್ಲೆಯ ಏಕೈಕ ಕಾಂಗ್ರೇಸ್ ಶಾಸಕ, ಪ್ರಭಾವಿ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆಯೊಂದು ಸಂಚು ರೂಪಿಸಿರುವ ಆಘಾತಕಾರಿ ಮಾಹಿತಿ ಗುಪ್ತಚರ ಇಲಾಖೆ ಸರಕಾರಕ್ಕೆ ನೀಡಿದೆ. ಈ ಹಿನ್ನಲೆಯಲ್ಲಿ ಖಾದರ್ ಅವರಿಗೆ ಭದ್ರತೆ ನೀಡಲು ಸರಕಾರ ಮುಂದೆ ಬಂದಿದ್ದು, ಆದರೆ ಖಾದರ್ ಭದ್ರತೆ ನಿರಾಕರಿಸಿದ್ದಾರೆ.

ಮೈಸೂರಿನ ಕಾಂಗ್ರೇಸ್ ಶಾಸಕ ತನ್ವೀರ್ ಸೇಠ್ ಅವರ ಹತ್ಯೆಗೆ ಸಂಚು ರೂಪಿಸಿದಂತೆ ಸಂಘಟನೆಯೊಂದು ಖಾದರ್ ಹತ್ಯೆಗೆ ಸ್ಕೆಚ್ ಹಾಕಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ತಿಳಿಸಿದೆ.

ಈ ಹಿನ್ನಲೆ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸರಕಾರ ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಖಾದರ್ ನನಗೆ ಜೀವ ಬೆದರಿಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತ: ಗೃಹ ಸಚಿವರು ನನಗೆ ಕರೆ ಮಾಡಿ ಹೇಳಿ ಭದ್ರತೆ ಪಡೆಯುವಂತೆ ಹೇಳಿದ್ದಾರೆ. ಆದರೆ ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಅಂತ ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.

ಎಸಿಪಿ ಒಬ್ಬರು ಮನೆಗೆ ಬಂದು ಮಾತನಾಡಿದ್ದಾರೆ. ಭದ್ರತೆ ಕೊಟ್ಟರೆ ಸರಿಯಾಗಿ ಕೊಡಬೇಕು. ಒಬ್ಬ ಪೊಲೀಸರ ಭದ್ರತೆ ಕೊಟ್ಟು ಹೆಚ್ಚು ಕಡಿಮೆ ಯಾದರೆ ಯಾರು ಹೊಣೆ? ತನ್ವೀರ್ ಸೇಟ್ ಅವರಿಗೂ ಓರ್ವ ಗನ್ ಮೆನ್ ಕೊಟ್ಟಿದ್ದರು. ಘಟನೆಯಾದ ನಂತರ ಆ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇದರಲ್ಲಿ ಆತನ ತಪ್ಪು ಏನು? ಓರ್ವ ಪೊಲೀಸ್ ಭದ್ರತೆಗೆ ನಿಯೋಜಿಸಿದರೆ ಆತ 8 ಗಂಟೆ ಕೆಲಸ ಮುಗಿಸಿ ಹೋಗುತ್ತಾನೆ. ಆಮೇಲೆ ಏನು ಮಾಡುವುದು? ನನಗೆ ಬೆದರಿಕೆ ಇದೆ ಎಂದು ಗೃಹ ಸಚಿವರೆ ಹೇಳಿದ್ದಾರೆ. ಆದರೆ ಸೂಕ್ತ ಭದ್ರತೆ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಾನು ಶಾಸಕನಾಗಿ ಯಾವತ್ತು ಗನ್ ಮನ್ ಇಟ್ಟುಕೊಂಡಿಲ್ಲ. ಈಗ ಓರ್ವ ಸಿಬ್ಬಂದಿಯನ್ನು ದಿನದ 8 ಗಂಟೆಯ ಕಾಲ ಜೊತೆಗಿಟ್ಟುಕೊಂಡು ಅವನಿಗೆ ನಾನು ತೊಂದರೆ ನೀಡುವುದಿಲ್ಲ. ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ. ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ ಎಂದು ಹೇಳಿ ಸರ್ಕಾರದ ವಿರುದ್ಧ ಖಾದರ್ ಹರಿಹಾಯ್ದಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *