Connect with us

DAKSHINA KANNADA

ಪ್ಯಾಲೆಸ್ಟೈನ್  ಬಗ್ಗೆ ಕಾಳಜಿ ತೋರಿ, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ಕಾಂಗ್ರೆಸ್ ಎಡಪಕ್ಷಗಳಿಗೆ ಛಾಟಿ ಬೀಸಿದ ಡಾ. ಭರತ್ ಶೆಟ್ಟಿ..!  

ಸುರತ್ಕಲ್ : ಪ್ಯಾಲೆಸ್ಟೈನ್  ಬಗ್ಗೆ ಕಾಳಜಿ ತೋರಿ, ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಶಾಸಕ ಡಾ. ಭರತ್ ಶೆಟ್ಟಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿ ಪ್ಯಾಲೆಸ್ಟೈನ್ ಪರ ಹೋರಾಟ ಮಾಡುವ ಮೊದಲು ಇಸ್ರೇಲ್ ಮೇಲೆ ಉಗ್ರರು ನಡೆಸಿದ ನರಮೇಧ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆಯೂ ಕಾಂಗ್ರೆಸ್, ಎಡಪಕ್ಷಗಳು ಕನಿಕರ ತೋರಿ ಖಂಡಿಸುವ ಕೆಲಸ ಮಾಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಛಾಟಿ ಬೀಸಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳನ್ನು ಹತ್ಯೆ ಮಾಡಿ ಅವರ ಆಸ್ತಿ ,ಮನೆಗೆ ಬೆಂಕಿ ಹಾಕಿದಾಗಲೂ ಈ ಎಡ ಪಕ್ಷಗಳಿಗೆ ಕನಿಕರ ಬಂದಿಲ್ಲ.ಮೌನವಾಗಿ ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ.ರೈತರ ಮೇಲೆ ,ದೇಶದ ಜನರನ್ನು ಬೀದಿಗೆ ತಳ್ಳುತ್ತಿರುವ ವಕ್ಫ್ ದೌರ್ಜನ್ಯದ ಬಗ್ಗೆಯೂ ಚಕಾರ ಎತ್ತದ ಈ ಎಡ ಪಕ್ಷಗಳು ಮೌನಕ್ಕೆ ಶರಣಾಗಿವೆ. ಇಸ್ರೇಲ್ ನ ಯಹೂದಿಗಳ ಮೇಲೆ ನಡೆದ ದಾಳಿಯನ್ನು ಕಂಡು ಕಾಣದಂತೆ ಇರುವ ಮನಸ್ಥಿತಿಯ ಮಂದಿ ಇಂದು ಉಗ್ರರ ನಾಮಾವಶೇಷವಾಗುತ್ತಿರುವಾಗ ಪ್ರತಿಭಟನೆಯ ನೆನಪಾಗುತ್ತದೆ.
ಪ್ಯಾಲಸ್ತೇನ್ ದಾಳಿ ಮಾಡಲು ಪ್ರಚೋದನೆ ನೀಡಿದವರನ್ನು ಮೊದಲು ಖಂಡಿಸುವ ಧೈರ್ಯ ತೋರಬೇಕು. ಕೇವಲ ಹಿಂದೂ ವಿರೋಧಿ ಓಟ್ ಬ್ಯಾಂಕ್ ಮಾಡುವ ಕಾಂಗ್ರೆಸ್ ಸಹಿತ ಇಂತಹ ರಾಜಕೀಯ ಪಕ್ಷಗಳ ಬಂಡವಾಳ, ಮೊಸಳೆ ಕಣ್ಣೀರು ಜನರಿಗೆ ಅರಿವಾಗತೊಡಗಿದ್ದು ದೇಶದಲ್ಲಿ ರಾಷ್ಟ್ರೀಯ ತೆಯ ಚಿಂತನೆಯ ಧ್ರುವೀಕರಣ ಆರಂಭಗೊಂಡಿದೆ ಎಂದು ಹೇಳಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *