Connect with us

LATEST NEWS

ಮಂಗಳೂರಿನ ಖ್ಯಾತ ವೈದ್ಯ ಡಾ. ಜಯರಾಮ ಶೆಟ್ಟಿ ಹೃದಯಾಘಾತದಿಂದ ನಿಧನ

ಮಂಗಳೂರು ಜನವರಿ 12: ಮಂಗಳೂರಿನ ಖ್ಯಾತ ವೈದ್ಯ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ ಜನವರಿ 11ರಂದು ಬುಧವಾರ ನಿಧನ ಹೊಂದಿದರು. ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ ವೈದ್ಯರಾಗಿದ್ದ ಸೇವೆ ಸಲ್ಲಿಸುತ್ತಿದ್ದರು.


ಮಂಗಳೂರಿನ ಕೆ.ಎಂಸಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಉನ್ನತ ಶಿಕ್ಷಣ ಪಡೆದ ಬಳಿಕ ಸುಮಾರು ಒಂದು ದಶಕಗಳಿಗಿಂತ ಹೆಚ್ಚು ಕಾಲ ರೇಡಿಯೇಷನ್ ಆಂಕಾಲಜಿ ಚಿಕಿತ್ಸಾ ವಿಭಾಗದಲ್ಲಿ ಸೇವೆ ಸಲ್ಲಿಸಿ ಕಳೆದ 11 ವರುಷಗಳಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ರೇಡಿಯೇಷನ್ ಅಂಕೋಲಾಜಿ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬುಧವಾರ ಸಂಜೆಯವರೆಗೆ ಕಾರ್ಯ ನಿರ್ವಹಿಸಿ ಮನೆಗೆ ತೆರಳಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ. ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದ ಅವರು ಅನೇಕ ಬಡ ರೋಗಿಗಳ ಚಿಕಿತ್ಸೆಗೆ ಸಹಾಯಹಸ್ತ ನೀಡುತ್ತಿದ್ದರು.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *