Connect with us

    DAKSHINA KANNADA

    ಡಾ. ಎಂ.ಮೋಹನ್ ಆಳ್ವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ಪ್ರಧಾನ

    ಪುತ್ತೂರು, ಜೂನ್ 12: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ, ಪುತ್ತೂರು ಇದರ ವಾರ್ಷಿಕ ಮಹಾಸಭೆ ಮತ್ತು ಸ್ವರ್ಣ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ ಜೂನ್ 17 ರಂದು ಪುತ್ತೂರಿನ ಜೈನಭವನ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ ಹೇಳಿದರು.

    ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2022ರಾಜ್ಯ ನಿವೃತ್ತನೌಕರರ ಸಂಘ ಪುತ್ತೂರು ಇದರ ಐವತ್ತು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶಿಕ್ಷಣ, ಕಲೆ,ಸಾಂಸ್ಕೃತಿಕ, ಕೃಷಿ ಮತ್ತು ನೀರಾವರಿ ಕ್ಷೇತ್ರದಲ್ಲಿ ಸಾಧನೆ ತೋರಿದ ಸಾಧಕರನ್ನು ಗುರುತಿಸುವ ನಿರ್ಧಾರಕ್ಕೆ ಬಂದ ಹಿನ್ನಲೆಯಲ್ಲಿ ಮೊದಲ ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ವಿಜೇತ ಮಹಾಲಿಂಗ ನಾಯ್ಕ ರನ್ನು ಆಯ್ಕೆ ಮಾಡಿ ಸನ್ಮಾನಿಸಿದ್ದೇವೆ.

    ಈ ಬಾರಿ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದ ಅನನ್ಯ ಸಾಧಕ ಡಾ‌.ಎಂ.ಮೋಹನ್ ಆಳ್ವ ಅವರಿಗೆ ಸ್ವರ್ಣ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಸನ್ಮಾನ ಕಾರ್ಯಕ್ರಮದ ಬಳಿಕ ಸಂಘದ ಮಹಾಸಭೆ ನಡೆಯಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply