KARNATAKA
ಯುವಕರ ಡ್ರ್ಯಾಗ್ ರೇಸ್ ನ ಹುಚ್ಚಾಟ….ಅಮಾಯಕನ ಸಾವು ಬದುಕಿನ ನಡುವಿನ ಹೋರಾಟ
ಬೆಂಗಳೂರು: ಬೆಂಗಳೂರಿನ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡ ಬೈಕ ಸವಾರ ಇನ್ನು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಮದ್ಯಪಾನ ಮತ್ತಿನಲ್ಲಿ ಯುವಕರು ಕಾರಿನಲ್ಲಿ ಡ್ರ್ಯಾಗ್ ರೇಸ್ ಮಾಡಿದ್ದೇ ಭಯಾನಕ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಹಠಕ್ಕೆ ಬಿದ್ದವರಂತೆ ನಾ ಮುಂದೆ ತಾ ಮುಂದೆ ಎಂಬಂತೆ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಎದುರಿನ ರಾಯಲ್ ಎನ್ಫೀಲ್ಡ್ ಬೈಕ್ಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ಪೀಸ್ ಆಗಿ, ಬೈಕ್ ಸವಾರ ಅಕ್ಷಯ್ (28) ಮೇಲಕ್ಕೆ ಹಾರಿಬಿದ್ದಿದ್ದ.
ಅಕ್ಷಯ್ ತೀವ್ರ ಗಾಯಗೊಂಡಿದ್ದು, ಸೊಂಟದಿಂದ ಮೇಲೆ ಸ್ವಾಧೀನ ಕಳೆದುಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Facebook Comments
You may like
-
ಆರ್ಥಿಕ ಮುಗ್ಗಟ್ಟಿಗೆ ಯವ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ
-
ಕಾರ್ಕಳ – ಸ್ಕೂಟರ್ಗೆ ಬೈಕ್ ಡಿಕ್ಕಿ ಓರ್ವ ಸಾವು
-
ಕಾರು, ವ್ಯಾನ್ ಮೇಲೆ ಉರುಳಿ ಬಿದ್ದ ಕಲ್ಲು ತುಂಬಿದ್ದ ಟ್ರಕ್ – 13 ಮಂದಿ ಸಾವು
-
ಟಿಪ್ಪರ್ ಲಾರಿ – ಓಮ್ನಿ ನಡುವೆ ಭೀಕರ ರಸ್ತೆ ಅಪಘಾತ ಇಬ್ಬರು ಗಂಭೀರ
-
ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್ – 15 ಮಂದಿ ಸಾವು
-
ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕೊಳೆತ ಭ್ರೂಣದ ಅವಶೇಷ ಪತ್ತೆ..!!
You must be logged in to post a comment Login