Connect with us

    LATEST NEWS

    ಮೂರು ಮುತ್ತು ಖ್ಯಾತಿಯ ರಂಗಕಲಾವಿದ ಅಶೋಕ್ ಶ್ಯಾನುಭಾಗ್ ಇನ್ನಿಲ್ಲ

    ಕುಂದಾಪುರ ಡಿಸೆಂಬರ್ 09: ಖ್ಯಾತ ರಂಗಕಲಾವಿದ ಮೂರುಮುತ್ತು ನಾಟಕ ಖ್ಯಾತಿಯ ನಟ ಅಶೋಕ್ ಶ್ಯಾನುಭಾಗ್ ಅಲ್ಪಕಾಲದ ಅಸೌಖ್ಯದಿಂದಾಗಿ ನಿಧನರಾಗಿದ್ದಾರೆ. ಅವರಿದೆ 54 ವರ್ಷ ವಯಸ್ಸಾಗಿತ್ತು.


    ಕುಂದಾಪುರದ ಪಟ್ಟಣ್ ಶೇಟ್, ಹುಲಿಮನೆ ದಿ.ನಾರಾಯಣ ಶ್ಯಾನುಭೋಗ್ ಹಾಗೂ ದಿ. ಕಸ್ತೂರಿ ಶ್ಯಾನುಭಾಗ್ ಅವರ ಪುತ್ರ ಅಶೋಕ್ ಶ್ಯಾನುಭೋಗ್ ಅವರು 1979ರಲ್ಲಿ ರೂಪಕಲಾ ಸಂಸ್ಥೆಯಲ್ಲಿ ಬಾಲ ಕಲಾವಿದರಾಗಿ ಸತ್ಯ ಹರಿಶ್ಚಂದ್ರ, ಟಿಪ್ಪು ಸುಲ್ತಾನ್ ನಾಟಕದ ಮೂಲಕ ರಂಗಭೂಮಿ ಪ್ರವೇಶಿಸಿದವರು. ಓದಿನ ಬಳಿಕ ನಿರಂತರವಾಗಿ ರಂಗಭೂಮಿ, ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು.

    ಸ್ವ ಉದ್ಯೋಗ ಮಾಡಿಕೊಂಡಿದ್ದ ಅಶೋಕ್ ಅವರು ನಾಟಕವನ್ನೇ ಬದುಕಿನ ಭಾಗವಾಗಿಸಿಕೊಂಡಿದ್ದರು. ರೂಪಕಲಾ ಸಂಸ್ಥೆಯ ದಿ. ಬಾಲಕೃಷ್ಣ ಪೈ (ಕುಳ್ಳಪ್ಪು) ಅವರ ನೆಚ್ಚಿನ ಶಿಷ್ಯರಾಗಿದ್ದ ಅವರು ಕುಳ್ಳಪ್ಪು ಅವರ 53 ನಾಟಕಗಳಲ್ಲಿ ಹಾಗೂ ಸತೀಶ್ ಪೈ ಅವರ 11 ನಾಟಕ ಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರೂಪಕಲಾ ಸಂಸ್ಥೆಯ ನಾಟಕಗಳು ಕನ್ನಡ ಮತ್ತು ಕೊಂಕಣಿಯಲ್ಲಿ ಏಳು ಸಾವಿರಕ್ಕೂ ಮಿಕ್ಕಿ ಪ್ರದರ್ಶನ ಕಂಡಿದ್ದವು. ಮೂರು ಮುತ್ತು, ಅವನಲ್ಲ ಇವನು, ಪಾಪ ಪಾಂಡು, ಅಳುವುದೋ ನಗುವುದೋ, ರಾಮ ಕೃಷ್ಣ ಗೋವಿಂದ ಇನ್ನುಹಲವಾರು ನಾಟಕಗಳಲ್ಲಿ ಹಾಸ್ಯ ಪಾತ್ರದಿಂದ ಮಿಂಚಿದ್ದರು. ಇವರ ಅಗಲಿಕೆಯ ಸುದ್ದಿ ಅಪಾರ ಅಭಿಮಾನಿಗಳಿಗೆ ದುಃಖ ಉಂಟುಮಾಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply