Connect with us

LATEST NEWS

ಜಪ್ಪಿನಮೊಗರು ಇಬ್ಬರನ್ನು ಬಲಿ ಪಡೆದ ಕಾರು ಅಪಘಾತಕ್ಕೆ ಡ್ರಿಂಕ್ ಆ್ಯಂಡ್ ಡ್ರೈವ್ ಕಾರಣ

ಮಂಗಳೂರು, ಜೂನ್ 19 : ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದು, ಇದಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದೆ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.


ಜೂನ್ 18 ರಂದು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಘಟನೆಗೆ ಕಾರು ಚಾಲಕನಾಗಿದ್ದ ಅಮನ್ ರಾವ್ ಮದ್ಯಪಾನ ಮಾಡಿ ಅತಿ ವೇಗದಲ್ಲಿ ಕಾರು ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.


ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ ಮತ್ತು ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಮೃತಪಟ್ಟಿದ್ದು ಸಹ ಪ್ರಯಾಣಿಕರಾಗಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನ ಚಾಲಕ ಮದ್ಯ ಸೇವಿಸಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಮೋಟಾರು ವಾಹನ ಕಾಯಿದೆ ಅನ್ವಯ ಕೇಸು ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮದ್ಯಸೇವಿಸಿ ವಾಹನ ಚಲಾಯಿಸಬೇಡಿ ಎಂದಿದೆ.

1. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಭಿತರ ಮೇಲೆ ಪ್ರಭಾವ ಬಿದ್ದು ದುಃಖ ಅನುಭವಿಸುತ್ತಾರೆ.
2. ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 185 ಅನ್ವಯ ಪ್ರಕರಣ ದಾಖಲಿಸಿ ರೂ 10,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
3.ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಮತ್ತು ಕುಟುಂಬಸ್ಥರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅತೀವೇಗದಿಂದ (Over Speed) ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯಿದೆ ಕಲಂ 183 ಅನ್ವಯ ಪ್ರಕರಣ ದಾಖಲಿಸಿ 2/3/LMV- ವಾಹನಗಳಿಗೆ ರೂ 1,000/-, HMV/HGV/OTHERS- ವಾಹನಗಳಿಗೆ 2,000/- ವರೆಗೆ ದಂಡ ಪಾವತಿಸಬೇಕಾಗುತ್ತದೆ.
ಅದುದರಿಂದ ಮಧ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡಬಾರದು ಹಾಗೂ ಅತೀವೇಗದಿಂದ (Over Speed) ವಾಹನ ಚಾಲನೆ ಮಾಡದೇ ಎಚ್ಚರದಿಂದ ವಾಹನ ಚಾಲನೆ ಮಾಡುವಂತೆ ಸಾರ್ವಜನಿಕರಿಗೆ ಈ ಮೂಲಕ ಕೋರಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *