Connect with us

    FILM

    ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದ ಡ್ರೋನ್ ಪ್ರತಾಪ್

    ಬೆಂಗಳೂರು ಡಿಸೆಂಬರ್ 04: ತನ್ನ ಸುಳ್ಳಿನಿಂದಲೇ ಸಾಮ್ರಾಜ್ಯ ಕಟ್ಟಿಕೊಂಡಿದ್ದ ಡ್ರೋನ್ ಪ್ರತಾಪ್ ಇದೀಗ ಬಿಗ್ ಬಾಸ್ ನಲ್ಲೂ ಮತ್ತೆ ಅದೇ ರೀತಿ ಸುಳ್ಳುಗಳನ್ನು ಹೇಳ ತೊಡಗಿದ್ದು, ಸಿಂಪತಿಗಾಗಿ ಇದೀಗ ಬಿಬಿಎಂಪಿ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಿದ್ದಾನೆ.


    ಕೊರೊನಾದ ಕ್ವಾರಂಟೈನ್ ಸಮಯದಲ್ಲಿ ಅಧಿಕಾರಿಯೊಬ್ಬರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದರು. ಮೆಂಟಲಿ ಅನ್‍ಸ್ಟೇಬಲ್ ಅಂತಾ ಸಹಿ ಮಾಡುವಂತೆ ತಲೆತಲೆಗೆ ಹೊಡೆದು ಕಿರುಕುಳ ಕೊಟ್ಟರು. ಹೋಟೆಲ್‍ನಿಂದ ಕೆಳಗೆ ಬಂದ್ಮೇಲೆ ನನಗೆ ಏನೇನು ಮಾಡಿದ್ರೋ, ಅದನ್ನ ಸ್ವಲ್ಪ ಹೇಳಿದೆ. ಇವ್ನು ಹೇಗಿದ್ರೂ ಸುಳ್ಳು ಹೇಳ್ತಾನೆ. ಇವ್ನು ಹೇಳೋದೇ ಸುಳ್ಳು.. ನಂಬಬೇಡಿ ಎಂದು ಮಾಧ್ಯಮಗಳಿಗೆ ಹೇಳಿ ಕಳುಹಿಸಿದರು. ಕ್ವಾರಂಟೈನ್‍ನಲ್ಲಿ ಮಾನಸಿಕ ಹಿಂಸೆ ಕೊಟ್ರು, ಹುಚ್ಚ ಅಂತಾ ಪೇಪರ್ ಗೆ ಸಹಿಹಾಕು ಅಂತಾ ಹೇಳಿದ್ರು ಎಂದು ಡ್ರೋನ್ ಪ್ರತಾಪ್ ಆರೋಪ ಮಾಡಿದ್ದಾರೆ.

    ಆದರೆ ಡ್ರೋನ್ ಪ್ರತಾಪ್ ಅವರ ಆರೋಪಗಳನ್ನು ಬಿಬಿಎಂಪಿ ಅಧಿಕಾರಿಗಳು ನಿರಾಕರಿಸಿದ್ದು, ಆತನಿಗೆ ಯಾವುದೇ ರೀತಿಯ ತೊಂದರೆ ನೀಡಿಲ್ಲ. ಒಳ್ಳೆ ಹೊಟೇಲ್ ನಲ್ಲಿ ಒಳ್ಳೆ ರೀತಿಯ ಆಹಾರ ಕೊಟ್ಟಿದ್ದೇವೆ ಎಂದಿದ್ದಾರೆ. ಅಲ್ಲದೆ ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ಕೊಟ್ಟಿಲ್ಲ. ಆತನ ತಲೆಯ ಮೇಲೆ ಹೊಡೆದಿಲ್ಲ. ಪ್ರತಾಪ್ ಮಹಾನ್ ಸುಳ್ಳುಗಾರ, ಈತ ಹೇಳುವ ಮಾತಿಗೆ ಒಂದೇ ಒಂದು ಸಾಕ್ಷ್ಯ ಒದಗಿಸಲಿ. ಆತನ ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಟ್ಟು ಹೊರಟು ಹೋಗುತ್ತೇನೆ ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಹೇಳಿದ್ದಾರೆ.

    ಆತನ ವೈಯಕ್ತಿಕ ವಿಚಾರ…. ತಂಗಿ, ಮದುವೆ, ತಾಯಿ ಯಾವುದೂ ನಾನು ಮಾತಾನಾಡಿಲ್ಲ. ಪ್ರತಾಪ್ ತಂದೆ ಬಹಳ ಒಳ್ಳೆಯವರು. ಬೇಕಾದ್ರೇ ಅವರನ್ನು ಕೇಳಲಿ. ಇದುವರೆಗೆ ಆತನಿಗೆ ಹಿಂಸೆ ಆಗಿದ್ದರೆ ಯಾಕೆ ನನ್ನ ವಿರುದ್ಧ ದೂರು ಕೊಡಲಿಲ್ಲ..?. ಆತನ ಮನೆಯ ವಾಚ್ ಮ್ಯಾನ್ ಇದ್ದ. ನಾವು ಅಪಾರ್ಟ್‍ಮೆಂಟ್ ಬೀಗ ಒಡೆದಿಲ್ಲ. ಪ್ರತಾಪ್ ಸುಳ್ಳು ಹೇಳ್ಕೊಂಡು ಟೋಪಿ ಹಾಕೋನು. ಆತನನ್ನು ಒಳ್ಳೆ ಹೋಟೆಲ್‍ನಲ್ಲಿ ಇರಿಸಿ ಉತ್ತಮ ಊಟ ಕೊಟ್ಟು ಇರಿಸಿದ್ದೇವೆ. ಇನ್ನೆರಡು ದಿನದಲ್ಲಿ ಕ್ಷಮೆಯಾಚನೆ ಮಾಡದೇ ಇದ್ರೇ ಕಾನೂನು ಹೋರಾಟ ಮಾಡುತ್ತೇನೆ. ಬಿಗ್ ಬಾಸ್ ವೇದಿಕೆಯಲ್ಲಿ ಕ್ಷಮೆಯಾಚನೆ ಮಾಡದೆ ಇದ್ರೇ ಮಾನನಷ್ಟ ಮೊಕದ್ದಮೆ ಹಾಕ್ತೇನೆ ಅಂತ ವಾರ್ನಿಂಗ್ ಕೊಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply