Connect with us

LATEST NEWS

ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ನೀರುಪಾಲಾಗಿದ್ದ ಮಹಿಳೆ ಮೃತದೇಹ ಪತ್ತೆ

ಉಡುಪಿ ಸೆಪ್ಟೆಂಬರ್ 12: ಮಗನನ್ನು ರಕ್ಷಿಸಲು ಹೋಗಿ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿಹೋಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ನೀರುಪಾಲಾದ ಮಹಿಳೆಯನ್ನು ಕೇರಳದ ತಿರುವನಂತಪುರ ನಿವಾಸಿ ಮುರಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 10 ರಂದು ತಿರುವನಂತಪುರದಿಂದ ಮುರುಗನ್ ಅವರು ಪತ್ನಿ ಚಾಂದಿ ಶೇಖರ್, ಮಗ ಆದಿತ್ಯನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ್ದು ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು. ಶನಿವಾರ ಸಂಜೆ ಎಲ್ಲರೂ ಸೌಪರ್ಣಿಕಾ ಸ್ನಾನ ಘಟ್ಟಕ್ಕೆ ತೆರಳಿದ್ದು ನೀರಿಗಿಳಿದ ಮುರುಗನ್ ನೀರಿನ ಸೆಳೆತಕ್ಕೆ ಸಿಲುಕಿದಾಗ ಪುತ್ರ ಆದಿತ್ಯ ಅವರ ರಕ್ಷಣೆಗೆ ಮುಂದಾಗಿದ್ದಾನೆ.


ಈ ವೇಳೆ ಆದಿತ್ಯ ಕೂಡ ನೀರಿನ ಸೆಳೆತಕ್ಕೆ ಸಿಲುಕಿದ್ದು ಇದನ್ನು ಗಮನಿಸಿದ ಚಾಂದಿ ಶೇಖರ್ ನೀರಿಗೆ ಧುಮುಕಿ ಪತಿ ಹಾಗೂ ಪುತ್ರನ ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಆದರೆ ಇವರಿಗೆ ಈಜು ಬಾರದ ಕಾರಣ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಇದೇ ವೇಳೆ ಅಲ್ಲಿದ್ದ ಇತರ ಯಾತ್ರಾರ್ಥಿಗಳು ಹಾಗೂ ಸ್ಥಳೀಯರು ಮುರುಗನ್ ಮತ್ತು ಆತನ ಪುತ್ರ ಆದಿತ್ಯನನ್ನು ರಕ್ಷಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *