Connect with us

LATEST NEWS

ಮಂಗಳೂರು – ಈಜಲು ಹೋಗಿ ನೀರುಪಾಲಾದ ಇಬ್ಬರು ಯುವಕರು…!!

Share Information

ಮಂಗಳೂರು ಜುಲೈ 30: ನೀರು ತುಂಬಿದ್ದ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಮುಳುಗಿ ಸಾವನಪ್ಪಿದ ಘಟನೆ ಅಳಪೆ ಪಡ್ಪು ಬಳಿ ನಡೆದಿದೆ.


ಅಳಪೆಯ ಸ್ಥಳೀಯ ನಿವಾಸಿಗಳಾದ ವರುಣ್ (26) ಮತ್ತು ವೀಕ್ಷಿತ್ (26) ನೀರುಪಾಲಾದವರು ಎಂದು ತಿಳಿದುಬಂದಿದೆ. ವರುಣ್ ವೃತ್ತಿಯಲ್ಲಿ ಚಾಲಕರಾಗಿದ್ದರು. ವಿಕ್ಷಿತ್ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದರು.

ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಆರು ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಉಳಿದವರು ಕ್ರಿಕೆಟ್ ಆಡುತ್ತಿದ್ದಾಗ ವರುಣ್ ಮತ್ತು ವಿಕ್ಷಿತ್ ರೈಲು ಹಳಿ ಪಕ್ಕದಲ್ಲಿ ನೀರು ತುಂಬಿದ್ದ ಗುಂಡಿಯಲ್ಲಿ ಪಕ್ಕದಲ್ಲೇ ಕುಳಿತಿದ್ದರು. ವರುಣ್ ಆಯತಪ್ಪಿ ನೀರಿಗೆ ಬಿದ್ದರು. ಇದನ್ನು ನೋಡಿದ ತಕ್ಷಣವೇ ವಿಕ್ಷಿತ್ ಹೊಂಡಕ್ಕೆ ಧುಮಿಕಿ ಅವರನ್ನು ರಕ್ಷಿಸಲು ಯತ್ನಿಸಿದ್ದರು. ಹೊಂಡದಲ್ಲಿ ಹೂಳು ತುಂಬಿದ ಕಾರಣ ಇಬ್ಬರೂ ನೀರಿನಿಂದ ಮೇಲಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಅಲ್ಲೇ ಇದ್ದ ಗೆಳೆಯರು ಹಾಗೂ ಸ್ಥಳೀಯರು ಅವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ರಾತ್ರಿ ವೇಳೆ ಹೊಂಡದಿಂದ ಹೊರಗೆ ತೆಗೆದರು.


Share Information
Advertisement
Click to comment

You must be logged in to post a comment Login

Leave a Reply