Connect with us

LATEST NEWS

ಹೆಜಮಾಡಿ ಅಳಿವೆ ಸಮೀಪ ಸ್ನಾನಕ್ಕೆ ಇಳಿದ ಬಾಲಕರು ನೀರು ಪಾಲು

ಉಡುಪಿ ನವೆಂಬರ್ 5: ಉಡುಪಿ ಹೆಜಮಾಡಿ ಕಾಮಿನಿ ಹೊಳೆ ಹಾಗೂ ಸಮುದ್ರ ಸೇರುವ ಮುಟ್ಟಳಿವೆ ಬಳಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ನಡೆದಿದೆ.


ಹೆಜಮಾಡಿ ಎನ್.ಎಸ್. ರಸ್ತೆಯ ಮೊಹ್ಸಿನ್(16) ಹಾಗೂ ಎಸ್.ಎಸ್.ರಸ್ತೆ ನಿವಾಸಿ ಮುಹಮ್ಮದ್ ರಾಯಿಸ್(16) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮೂವರು ಬಾಲಕರು ಹೆಜಮಾಡಿಯ ಕಾಮಿನಿ ಹೊಳೆ ಹಾಗೂ ಸಮುದ್ರ ಸೇರುವ ಮುಟ್ಟಳಿವೆ ಬಳಿ ಸ್ನಾನ ಮಾಡಲು ತೆರಳಿದ್ದರು. ದಡದಲ್ಲಿ ಸ್ನಾನ ಮಾಡಿ ಈಜಲು ನೀರಿಗೆ ಇಳಿದ ವೇಳೆ ದುರ್ಘಟನೆ ನಡೆದಿದೆ.
ಮೂವರು ಬಾಲಕರಲ್ಲಿ ಒಬ್ಬನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೊಹಮ್ಮದ್ ನಬೀಲ್ (16) ರಕ್ಷಣೆ ಮಾಡಲಾಗಿದ್ದು,  ಮೋಸಿನ್ ಮತ್ತು ರಾಯಿಸ್  ಮೃತಪಟ್ಟಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *