DAKSHINA KANNADA
ಪುತ್ತೂರು ತಾಲ್ಲೂಕಿನ ಮುಕ್ರಂಪಾಡಿ ಎಂಬಲ್ಲಿ ಗಾಂಜಾ ಸೇವನೆ.ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಪುತ್ತೂರು: ಮುಕ್ರಂಪಾಡಿ ಬಸ್ ತಂಗುದಾಣದಲ್ಲಿ ಗಾಂಜಾ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ನಡೆದಿದೆ.
ಮುಕ್ರಂಪಾಡಿ ಬಸ್ತಂಗುದಾಣದ ಬಳಿ ನಿಲ್ಲಿಸಿದ್ದ ಕಾರೊಂದರ ಬಳಿ ಗಾಂಜಾ ನಶೆಯಲ್ಲಿದ್ದ ಯುವಕರು ಅನುಚಿತವಾಗಿ ವರ್ತಿಸುತ್ತಿದ್ದ ಕುರಿತು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಅಗಮಿಸಿದ ಎಸ್.ಐ ಜಂಬುರಾಜ್ ಮಹಾಜನ್ ಅವರು ಅಲ್ಲಿದ್ದ ಅಬ್ದುಲ್ಲಾ, ಮೊಹಮ್ಮದ್ ಆರೀಫ್ ಮತ್ತು ರಹಿಮಾನ್ ಖಾನ್ ಮಂಜೇಶ್ವರ ಅವರನ್ನು ಹಾಗೂ ಅವರ ಕೇರಳ ನೋಂದಣಿಯ ಅವರ ಕಾರನ್ನು ವಶಕ್ಕೆ ಪಡೆದು ಕೊಂಡಿದ್ದರು. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅಬ್ದುಲ್ಲಾ ಮತ್ತು ರಹಿಮನ್ ಖಾನ್ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಕುರಿತು ವೈದ್ಯರು ವರದಿ ನೀಡಿದ್ದ ಹಿನ್ನಲೆಯಲ್ಲಿ ಅವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
You must be logged in to post a comment Login