DAKSHINA KANNADA
ದುಬೈನಲ್ಲಿ ಹೃದಯಾಘಾತದಿಂದ ನಿಧನರಾದ ಉದ್ಯಮಿ ಎಡಕ್ಕಾನ ರಾಜರಾಮ ಭಟ್

ಪುತ್ತೂರು ಮೇ 06: ಖ್ಯಾತ ಉದ್ಯಮಿ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜರಾಮ ಭಟ್ ದುಬೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸುಳ್ಯದ ಕಲ್ಮಡ್ಕ ಗ್ರಾಮದ ನಿವಾಸಿಯಾದ ರಾಜಾರಾಮ ಭಟ್ ಅವರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯಲ್ಲಿ ಹೊಂದಿದ್ದು, ದುಬೈ, ಮಸ್ಕತ್ಗಳಲ್ಲಿ ಖರ್ಜೂರದ ವ್ಯಾಪಾರ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಇಂದು (ಮಂಗಳವಾರ) ಮುಂಜಾನೆ ಹೃದಯಾಘಾತದಿಂದ ಮೃತ ಹೊಂದಿರುವುದಾಗಿ ತಿಳಿದು ಬಂದಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಇವರು, ಕಳೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಪುತ್ತಿಲ ಅವರು ಪಕ್ಷೇತರರಾಗಿ ಸ್ಪರ್ಧಿಸಿದಾಗ ಅವರ ಜೊತೆ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಚುನಾವಣೆಯ ಬಳಿಕವೂ ಅರುಣ್ ಪುತ್ತಿಲ ಅವರು ‘ಪುತ್ತಿಲ ಪರಿವಾರ’ ಎಂಬ ಸಾಮಾಜಿಕ ರಾಜಕೀಯ ಸಂಘಟನೆಯನ್ನು ಸ್ಥಾಪಿಸಿದಾಗ, ಅದರ ಜೊತೆಯೂ ಗುರುತಿಸಿಕೊಂಡಿದ್ದರು.