Connect with us

LATEST NEWS

ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಲ್ಲ ಎಂದು ನಟ ದುನಿಯಾ ವಿಜಯ್

ಬೆಂಗಳೂರು ಅಗಸ್ಟ್ 01: ಬೆಳ್ತಂಗಡಿಯಲ್ಲಿ ನಡೆದಿದ್ದ ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ಇಡೀ ದೇಶದಲ್ಲೇ ಸುದ್ದಿಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಕೂಡ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡುವುದಿಲ್ಲ ಎಂದಿದ್ದಾರೆ.


ದುನಿಯಾ ವಿಜಯ್ ಅವರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್​ಬುಕ್​ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಪ್ರತಿವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು. ಆದರೆ ಸೌಜನ್ಯ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ. ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ. ಹೆಚ್ಚು ಸಮಯ ಮರೆಮಾಚಲಾಗದು-ಬುದ್ಧ ಎಂದು ನಟ ಫೇಸ್​ಬುಕ್​ನಲ್ಲಿ ಬರೆದಿದ್ದಾರೆ.


ನಟನ ಈ ಪೋಸ್ಟ್ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸುತ್ತಿದ್ದಾರೆ. ನಿಜವಾದ ಮಾತು. ಸತ್ಯ ಯಾವತ್ತೂ ಕಹಿನೆ. ನಿಮ್ಮ ಈ ನಡೆ ಕುಷಿ ತಂದಿದೆ. ಹೀಗೆ ಎಲ್ಲ ಸೆಲೆಬ್ರಿಟಿಗಳು ಸೌಜನ್ಯ ಕೇಸ್ ಹೋರಾಟಕ್ಕೆ ಬೆಂಬಲ ಕೊಟ್ಟಿದ್ದರೆ, ಇನ್ನೂ ಉತ್ತಮವಾದ ವಿಚಾರ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

 

ಸೌಜನ್ಯ ಪ್ರಕರಣ ಧರ್ಮಸ್ಥಳದಲ್ಲಿ ನಡೆದಿದೆ ಎಂಬ ಕಾರಣಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿಯನ್ನು ಹೊಣೆ ಮಾಡುವುದು ಎಷ್ಟು ಸರಿ ,ನಾವು ಒತ್ತಡ ತರಬೇಕಿರುವುದು ಸರ್ಕಾರದ ಮೇಲೆ ಕಾನೂನಿನ ಮೂಲಕ ಸಮಸ್ಯೆ ಬಗೆಹರಿಸಬೇಕಿರುವುದು , ಅಪರಾಧಿಗಳನ್ನು ಗುರುತಿಸಿ ಶಿಕ್ಷೆ ನೀಡಬೇಕಾಗಿರುವುದು ಸರ್ಕಾರದ ಕೆಲಸ. ಇದರಲ್ಲಿ ಧರ್ಮಸ್ಥಳ ಅಥವಾ ಧರ್ಮಾಧಿಕಾರಿಗಳು ಏನು ಮಾಡಲು ಸಾಧ್ಯ ಎಂದಿದ್ದಾರೆ ಇನ್ನೊಬ್ಬರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *