Connect with us

    LATEST NEWS

    ಉಡುಪಿ: ಹಿಂದೂ ಜಾಗರಣಾ ವೇದಿಕೆಯ ದುರ್ಗಾದೌಡ್ ಮೆರವಣಿಗೆಯಲ್ಲಿ ತಲ್ವಾರ್ ಪ್ರದರ್ಶನ…!!

    ಉಡುಪಿ ಅಕ್ಟೋಬರ್ 15: ಇಂಧನ ಸಚಿವ ಸುನಿಲ್ ಕುಮಾರ್ ಭಾಗವಹಿಸಿರುವ ಉಡುಪಿಯಲ್ಲಿ ಹಿಂದೂಜಾಗರಣ ವೇದಿಕೆಯಿಂದ ದುರ್ಗಾದೌಡ್ ಕಾರ್ಯಕ್ರಮದ ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ತಲವಾರ್ ಪ್ರದರ್ಶಿಸಿದ್ದಾರೆ.


    ಮಹಾರಾಷ್ಟ್ರದಲ್ಲಿ ಹೆಚ್ಚಾಗಿ ನಡೆಯುವ ಈ ದುರ್ಗಾ ದೌಡ್ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ನಡೆಯಿತು. ಉಡುಪಿಯ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ನಡೆದ ಈ ವಿರಾಟ್ ಪ್ರದರ್ಶನದಲ್ಲಿ ಐದು ಸಾವಿರಕ್ಕೂ ಅಧಿಕ ಹಿಂದೂ ಕಾರ್ಯಕರ್ತರು ಭಾಗಿಯಾಗಿದರು.


    ನಗರದ ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿಯ ಜನಾರ್ದನ ಮಹಾಕಾಳಿ ದೇವಸ್ಥಾನದವರೆಗೆ ದುರ್ಗಾ ದೌಡ್ ನಡೆಯಿತು. ಸ್ವತ: ಇಂಧನ ಸಚಿವ ಸುನಿಲ್ ಕುಮಾರ್ ಮೆರವಣಿಗೆಯ ಮುಂಚೂಣಿಯಲ್ಲಿ ಭಾಗವಹಿಸಿದ್ದರು.


    ಮೆರವಣಿಗೆಯ ಮುಂಚೂಣಿಯಲ್ಲಿ ಕೆಲ ಕಾರ್ಯಕರ್ತರು ತಲವಾರುಗಳನ್ನು ಪ್ರದರ್ಶಿಸಿದರು. ಮಹಿಳಾ ತಂಡಗಳ ನೇತೃತ್ವ ವಹಿಸಿದ್ದ ಯುವತಿಯರು ಪ್ರಹಸನಗಳಲ್ಲಿ ಬಳಸುವ ಕತ್ತಿ, ಖಡ್ಗ ಹಿಡಿದು ಮೆರವಣಿಗೆ ಸಾಗಿದರು. ಬಳಿಕ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯ ಮಗ್ಗುಲಲ್ಲಿ ಬೃಹತ್ ಸಮಾವೇಶ ನಡೆಯಿತು. ಪ್ರಮುಖ ರಸ್ತೆಗಳಲ್ಲಿ ದುರ್ಗಾ ದೌಡ್ ಪೊಲೀಸರು ಹಾಜರಿದ್ದರು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply