Connect with us

    DAKSHINA KANNADA

    ಶಾಸಕ ಯತ್ನಾಳ್ ಬಾಯಿ ಮುಚ್ಚದಿದ್ದರೆ ಕೇಂದ್ರ ನಾಯಕರಿಂದ ಸೂಕ್ತ ಕ್ರಮ – ಡಿವಿ ಸದಾನಂದ ಗೌಡ

    ಪುತ್ತೂರು ಜನವರಿ 19: ಶಾಸಕ ಬಸವರಾಜ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದೇ ಇದ್ದಲ್ಲಿ ಕೇಂದ್ರ ನಾಯಕರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ.


    ಪುತ್ತೂರಿನಲ್ಲಿ ಬಿಜೆಪಿ ಪಕ್ಷದ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ್ ಯತ್ನಾಳ್ ನಾನು ಪಕ್ಷದ ರಾಜ್ಯಾಧ್ಯಕ್ಷ ನಾಗಿದ್ದ ಸಂದರ್ಭದಲ್ಲೂ ಇದೇ ರೀತಿಯ ವರ್ತನೆಯನ್ನು ತೋರುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆಯನ್ನು ಸರಿಪಡಿಸದ ಕಾರಣಕ್ಕೆ ನಾನೇ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದೆ. ಇದೀಗ ಮತ್ತೆ ಅವರು ಅಂಥಹುದೇ ವರ್ತನೆಯನ್ನು ತೋರಿಸಲು ಆರಂಭಿಸಿದ್ದಾರೆ. ಪಕ್ಷದ ವಿರುದ್ಧ ಪಕ್ಷದ ನಾಯಕರ ವಿರುದ್ಧ ಬೀದಿ ಬದಿಯಲ್ಲಿ ಚರ್ಚೆ ಮಾಡುತ್ತಿದ್ದಾರೆ.

    ಸಚಿವ ಸ್ಥಾನಕ್ಕಾಗಿ ಯತ್ನಾಳ್ ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನುವುದು ನಾಯಕರ ಗಮನಕ್ಕೆ ಬಂದಿದೆ. ಪಕ್ಷಕ್ಕೆ, ಪಕ್ಷದ ನಾಯಕರಿಗೆ ಸಲಹೆ ಕೊಡುವ ಕೆಲಸವನ್ನು ಯತ್ನಾಳ ನಿಲ್ಲಿಸಬೇಕು. ಯತ್ನಾಳ್ ಸಲಹೆ ಕೇಳುವಂತಹ ಮಟ್ಟದಲ್ಲಿ ಪಕ್ಷ ಈಗ ಇಲ್ಲ ಎಂದ ಅವರು ವಾಜಪೇಯಿ ಸರಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿದ್ದ ಯತ್ನಾಳ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದರು.

    ಇದೇ ರೀತಿಯ ವರ್ತನೆಯನ್ನು ಮುಂದುವರಿಸಿದ್ದಲ್ಲಿ ಕೇಂದ್ರ ನಾಯಕರು ಅವರ ಮೇಲೆ‌ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಶಾಸಕರಾಗಿ ಕ್ಷೇತ್ರದ ಜನರ ಕೆಲಸ ಮಾಡಿ ಎಂದು ಸಲಹೆ ನೀಡಿದ ಡಿ.ವಿ.ಸದಾನಂದ ಗೌಡ ಪಕ್ಷದಲ್ಲಿ ಅಸಮಾಧಾನವಿದ್ದಲ್ಲಿ ಅದನ್ನು ಕೇಂದ್ರ ನಾಯಕರ ಗಮನಕ್ಕೆ ತನ್ನಿ. ರಾಜ್ಯದ ಕೆಲವರು ನಾಯಕರು ದೆಹಲಿಗೆ ಬಂದು ಕೇಂದ್ರ ನಾಯಕರನ್ನು ಭೇಟಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಅದನ್ನು ಬಿಟ್ಟು ಬೀದಿ ಬದಿಯಲ್ಲಿ ಚರ್ಚೆ ಮಾಡುವುದನ್ನು ಪಕ್ಷ ಸಹಿಸುವುದಿಲ್ಲ ಎಂದು ಯತ್ನಾಳ ಅವರ ವಿರುದ್ಧ ಹರಿಹಾಯ್ದರು.

    Share Information
    Advertisement
    Click to comment

    You must be logged in to post a comment Login

    Leave a Reply