Connect with us

    LATEST NEWS

    ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆಯನ್ನು ಪರೋಕ್ಷವಾಗಿ ದೇಶದ್ರೋಹಿ ಎಂದ ಡಿ.ವಿ ಸದಾನಂದ ಗೌಡ

    ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆಯನ್ನು ಪರೋಕ್ಷವಾಗಿ ದೇಶದ್ರೋಹಿ ಎಂದ ಡಿ.ವಿ ಸದಾನಂದ ಗೌಡ

    ಬೆಂಗಳೂರು ಅಕ್ಟೋಬರ್ 2: ನೆರೆ ಪರಿಹಾರ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸಂಸದರನ್ನು ಟೀಕಿಸಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದಾರೆ. ಡಿ.ವಿ ಸದಾನಂದ ಅವರ ಹೇಳಿಕೆ ಬಗ್ಗೆ ಈಗ ಭಾರೀ ಟೀಕೆ ವ್ಯಕ್ತವಾಗಿದೆ.

    ಚಕ್ರವರ್ತಿ ಅವರ ಜನರ ಭಿಕ್ಷೆ ಪಡೆದು ಮಂತ್ರಿಯಾಗಿದ್ದೀರಾ ಎಂಬ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು.

    ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್‍ಗೆ ಸೇರುತ್ತಾರೆ ಎಂದು ಹೇಳಿದ ಅವರು ಭಾಷಣಗಳಿಂದ, ಟ್ವೀಟ್‍ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಲ್ಲದೆ ತಮ್ಮ ಟ್ವಿಟರ್ ಖಾತೆಯಿಂದ ಚಕ್ರವರ್ತಿ ಸೂಲಿಬೆಲೆಯವರನ್ನು ಬ್ಲಾಕ್ ಮಾಡಿದ್ದಾರೆ. ಈ ಮೂಲಕ ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡಲು ರಾತ್ರಿ ಹಗಲು ಹೊರಾಡಿದ ಯುವ ನೇತಾರನಿಗೆ ಬಿಜೆಪಿ ಪಕ್ಷ  ನೀಡಿದ ಬಹುಮಾನ ಇದಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply