Connect with us

DAKSHINA KANNADA

ನೀರು ಬರದಿದ್ದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ನಾವೇ ಬರುತ್ತೇವೆ – ಸಂತೋಷ್ ಬಜಾಲ್

ಮಂಗಳೂರು ಮಾರ್ಚ್ 28: ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ, ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಗುರುವಾರ ಬಜಾಲ್ ಕಟ್ಟಪುನಿ ಪ್ರದೇಶದ ನಿವಾಸಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಆಗ್ರಹಿಸಿ ಖಾಲಿ ಕೊಡಗಳನ್ನು ಹಿಡಿದು ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.


ಶಾಸಕ ವೇದವ್ಯಾಸ ಕಾಮತ್ ಕೋಟಿ ಕೋಟಿ ಅನುದಾನ ಬಜಾಲ್ ವಾರ್ಡಿಗೆ ತಂದಿದ್ದೇನೆಂದು ಅಲ್ಲಲ್ಲಿ ಬ್ಯಾನರ್ ಹಾಕಿಸಿದರೆ ಸಾಲದು, ಜನ ಅನುಭವಿಸುವ ಸಮಸ್ಯೆಗಳನ್ನು ಮೊದಲು ಆಲಿಸಲು ಮತ್ತದನ್ನು ಬಗೆಹರಿಸಲು ಮುಂದಾಗಲಿ, ಸ್ಥಳೀಯ ಕಾರ್ಪೊರೇಟರ್ ಕೂಡ ಈ ಸಮಸ್ಯೆಯನ್ನು ಸರಿಪಡಿಸಲು ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶ ಸ್ಥಳೀಯರಲ್ಲಿ ಮನೆ ಮಾಡಿದೆ. ಜಲಸಿರಿ ಯೋಜನೆಗೆ, ಸ್ಮಾರ್ಟ್ ಸಿಟಿಗೆ ಸಾವಿರಾರೂ ಕೋಟಿ ಹರಿದು ಬಂದರೂ ಕನಿಷ್ಟ ನಮಗೆ ನೀರು ಹರಿದು ತರಲು ಇವರಿಂದ ಸಾಧ್ಯವಾಗದಿರೋದು ನಾಚೀಕೆಗೇಡಿನ ಸಂಗತಿ ಎಂದರು. ಕೂಡಲೇ ಸಮಸ್ಯೆ ಬಗೆಹರಿಸಬೇಕು ಅಲ್ಲಿಯವರೆಗೆ ಟ್ಯಾಂಕರ್ ಮೂಲಕವಾದರೂ ನೀರು ವಿತರಿಸುವ ಕೆಲಸ ನಡೆಯಲಿ ಎಂದು ಪಾಲಿಕೆ ಆಡಳಿತವನ್ನು ಒತ್ತಾಯಿಸಿದರು.

ಹೋರಾಟಗಾರ ಸುನೀಲ್ ಕುಮಾರ್ ಬಜಾಲ್ ಮಾತನಾಡುತ್ತಾ ಸ್ಥಳೀಯ ಅಂಗನವಾಡಿ ಮಕ್ಕಳಿಗೂ ಕುಡಿಯಲು ನೀರಿಲ್ಲ. ನೀರಿನ ಸಮಸ್ಯೆ ಇದ್ದ ಕಡೆಗಳಿಗೆ ಹೇಗಾದರೂ ನೀರು ಒದಗಿಸುವುದು ಜಿಲ್ಲಾಡಳಿತದ ಜವಾಬ್ದಾರಿ ಆದರೆ ಈ ಊರಿನ ಜನ ಮನವಿಯನ್ನು ನೀಡಿದರೂ ನೀರಿನ ಸಮಸ್ಯೆ ಬಗೆಹರಿಸಲು ಮುಂದಾಗದಿರುವುದು ದುರಂತ. ರಂಜಾನ್ , ಯುಗಾದಿ ಹಬ್ಬಗಳು ನಮ್ಮ ಮುಂದೆ ಇದೆ ಕುಡಿಯಲು ಯೋಗ್ಯ ನೀರಿನ ವಿತರಣೆಗೆ ಕ್ರಮಕೈಗೊಳ್ಳಬೇಕು ಇಲ್ಲದೇ ಹೋದಲ್ಲಿ ಈ ಹೋರಾಟ ಪಾಲಿಕೆ ಅಧಿಕಾರಿಗಳ, ಶಾಸಕರ ಕಚೇರಿವರೆಗೂ ಕೊಂಡೊಯ್ಯಲಿದ್ದೇವೆ ಎಂದು ಎಚ್ಚರಿಸಿದರು.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *