Connect with us

LATEST NEWS

ಮೂರು ಅಧಿವೇಶನದಲ್ಲೂ ಗಮನ ಸೆಳೆದರೂ ಪ್ರಯೋಜನವಾಗಿಲ್ಲ – ಮಂಗಳೂರಿನ ಆಟೋಗಳಿಗೆ ತಮಿಳುನಾಡು ಮಾದರಿಯನ್ನು ಅನುಷ್ಠಾನಗೊಳಿಸಿ ಶಾಸಕ ಕಾಮತ್

ಮಂಗಳೂರು ಮಾರ್ಚ್ 11: ಮಂಗಳೂರಿನಲ್ಲಿ ಆಟೋರಿಕ್ಷಾಗಳ ನಡುವೆ ಉಂಟಾಗಿರುವ ಸಮಸ್ಯೆಗೆ ಪರಿಹಾರ ಮಾರ್ಗವಾಗಿರುವ ತಮಿಳುನಾಡು ಮಾದರಿಯನ್ನು ಕೂಡಲೇ ಅನುಷ್ಠಾನಗೊಳಿಸಿ ರಿಕ್ಷಾ ಚಾಲಕರ ನೆಮ್ಮದಿಯ ಬದುಕಿಗೆ ಸರ್ಕಾರ ಅನುವು ಮಾಡಿಕೊಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದರು.

ಈ ಬಗ್ಗೆ ಹಿಂದಿನ ಮೂರು ಅಧಿವೇಶನದಿಂದಲೂ ಸರ್ಕಾರದ ಗಮನವನ್ನು ಸೆಳೆಯಲಾಗಿದೆ ಮತ್ತು ಸಾರಿಗೆ ಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಸುಮಾರು ಹತ್ತು ಸಾವಿರದಷ್ಟು ಇರುವ ರಿಕ್ಷಾ ಚಾಲಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಕನಿಷ್ಠ ಈ ಅಧಿವೇಶದಲ್ಲಾದರೂ ಎಲ್ಲಾ ರಿಕ್ಷಾ ಚಾಲಕರುಗಳು ಬಯಸುತ್ತಿರುವ ತಮಿಳುನಾಡು ಮಾದರಿಯ ಪರಿಹಾರ ಮಾರ್ಗವನ್ನು ಅನುಷ್ಠಾನಗೊಳಿಸಿದರೆ ರಿಕ್ಷಾ ಚಾಲಕ ಬಂಧುಗಳ ನಡುವಿನ ಗೊಂದಲ-ಘರ್ಷಣೆ ಕಡಿಮೆಯಾಗುತ್ತದೆ ಎಂದು ಶಾಸಕರು ಹೇಳಿದರು.

ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಶಾಸಕ ಕಾಮತ್ ರವರ ಸಲಹೆಗೆ ನನ್ನ ಸಹಮತವಿದ್ದು ಖಂಡಿತವಾಗಿಯೂ ಈ ಬಗ್ಗೆ ಅತೀ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *