Connect with us

    DAKSHINA KANNADA

    ಸುಳ್ಯದಲ್ಲಿ ಬೆಳ್ಳಂಬೆಳಗ್ಗೆ ಶೂಟೌಟ್: ಬಿಜೆಪಿ ಮುಖಂಡನ ಕೊಲೆ ಪ್ರಕರಣದ ಆರೋಪಿಯ ಹತ್ಯೆ

    ಸುಳ್ಯ ಅಕ್ಟೋಬರ್ 8 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಶೂಟೌಟ್ ನಡೆದಿದೆ. ಮುಂಜಾನೆ 6.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಕಾರಲ್ಲಿ ಬಂದ ಅಪರಿಚಿತರು ಸುಳ್ಯ ಶಾಂತಿ ನಗರದಲ್ಲಿ ವಾಸವಿದ್ದ ಸಂಪತ್ ಕುಮಾರ್ (35) ಎಂಬವರನ್ನು ಹತ್ಯೆ ಮಾಡಲಾಗಿದೆ.

    ಕಾರಿನ ಗಾಜಿಗೆ ಗುಂಡೇಟು ಬಿದ್ದ ಕೂಡಲೇ ಸಂಪತ್ ಕಾರಿನಿಂದ ಇಳಿದು ಪಕ್ಕದ ಇನ್ನೊಂದು ಮನೆಯತ್ತ ಓಡಿದ್ದಾರೆ‌. ಆದರೆ ದುಷ್ಕರ್ಮಿಗಳು ಅವರನ್ನು ಬೆನ್ನಟ್ಟಿ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟು ತಗುಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂಪತ್ ಕುಮಾರ್ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತು. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಸಂಪತ್ ಕುಮಾರ್ ಮೃತಪಟ್ಟಿದ್ದಾರೆ.

    ಇದೊಂದು ಪೂರ್ವ ದ್ವೇಷದ ಕೃತ್ಯ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಗುಂಡೇಟಿಗೆ ಬಲಿಯಾದ ಸಂಪತ್ ವರ್ಷದ ಹಿಂದೆ ನಡೆದ ಕೊಡಗಿನ ಬಿಜೆಪಿ ಮುಖಂಡ ಕಳಗಿ ಬಾಲಚಂದ್ರ ಎಂಬವರ ಕೊಲೆ ಪ್ರಕರಣದ ಆರೋಪಿ ಎನ್ನಲಾಗಿದೆ.

    ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply