LATEST NEWS
ಚುನಾವಣಾ ವಿಜಯೋತ್ಸವಕ್ಕೆ ಬ್ರೇಕ್ ಹಾಕಿದ ಚುನಾವಣಾ ಆಯೋಗ
ನವದೆಹಲಿ ಎಪ್ರಿಲ್ 27: ಮದ್ರಾಸ್ ಹೈಕೋರ್ಟ್ ನ ಖಡಕ್ ವಾರ್ನಿಂಗ್ ನಂತರ ಎಚ್ಚೆತ್ತ ಚುನಾವಣಾ ಆಯೋಗ ವಿಧಾನಸಭಾ ಚುನಾವಣೆ, ವಿವಿಧ ಲೋಕಸಭೆ ಉಪಚುನಾವಣೆ ನಡೆದ ರಾಜ್ಯಗಳಲ್ಲಿ ಮತ ಎಣಿಕೆ ದಿನದಂದು ಮತ ಎಣಿಕೆಗೆ ಮೊದಲು ಅಥವಾ ನಂತರ ಎಲ್ಲಾ ಬಗೆಯ ವಿಜಯೋತ್ಸವಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಕೊರೋನಾವೈರಸ್ ಹರಡುವಿಕೆ ತಪ್ಪಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮೇ 2 ರಂದು ಕರ್ನಾಟಕದ ಬೆಳಗಾವಿ ಲೋಕಸಭೆ, ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಸೇರಿದಂತೆ ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿಯ ವಿಧಾನಸಭೆ ಚುನಾವಣಾ ಫಲಿತಾಂಶ ಹೊರಬೀಳಲಿದೆ. ಈ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ.
You must be logged in to post a comment Login