LATEST NEWS
ಉಡುಪಿ – ವಿದ್ಯುತ್ ಆಘಾತಕ್ಕೆ ಯುವಕ ಬಲಿ
ಉಡುಪಿ ಜೂನ್ 17:- ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆ ಬರುತ್ತಿದ್ದ ಸಂದರ್ಭ ಕರೆಂಟ್ ಸ್ವಿಚ್ಚ್ ರಿಪೇರಿ ಮಾಡಲು ಹೋಗಿ ವಿದ್ಯುದಾಘಾತಕ್ಕೆ ಯುವಕನೊಬ್ಬ ಮೃತಪಟ್ಟಿರುವ ಘಟನೆ ಉದ್ಯಾವರದಲ್ಲಿ ನಡೆದಿದೆ.
ಮೃತರನ್ನು ಮಲ್ಪೆ ಕೊಡವೂರು ನಿವಾಸಿ ಮೋಕ್ಷಿತ್ ಕರ್ಕೆರಾ ಎಂದು ಗುರುತಿಸಲಾಗಿದೆ. ಮೋಕ್ಷಿತ್ ವೃತ್ತಿಯಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದರು. ನಿನ್ನೆ ಸಂಜೆ ಮೋಕ್ಷಿತ್ ಅವರ ಚಿಕ್ಕಪ್ಪನ ಮನೆಯಲ್ಲಿ ಭಾರೀ ಗಾಳಿ ಮಳೆಗೆ ವಿದ್ಯುತ್ ಕೈಕೊಟ್ಟಿದ್ದು, ಈ ಹಿನ್ನಲೆ ಸ್ಥಳಕ್ಕೆ ತೆರಳಿದ ಮೋಕ್ಷಿತ್ ಮೈನ್ ಸ್ವಿಚ್ ಬೋರ್ಡ್ ಪರಿಶೀಲಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವಿದ್ಯುತ್ ಶಾಕ್ ನಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದಾರೆ.
You must be logged in to post a comment Login