Connect with us

KARNATAKA

ಕಾವಾಡಿಗನನ್ನು ಅಟ್ಟಾಡಿಸಿದ ಸಾಕಾನೆ ಮಣಿಕಂಠ

ಶಿವಮೊಗ್ಗ ಸೆಪ್ಟೆಂಬರ್ 12: ಕಾವಾಡಿಗನನ್ನು ಸಾಕಾನೆಯೊಂದು ಅಟ್ಟಾಡಿಸಿಕೊಂಡು ಓಡಿಸಿದ ಘಟನೆ ಶಿವಮೊಗ್ಗದ ಸಕ್ರೆಬೈಲಿನ ಅನೆ ಬಿಡಾರದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.


ಸಾಕಾನೆ ಮಣಿಕಂಠ ನನ್ನು ಆನೆ ಬಿಡಾರದಿಂದ ರಾಷ್ಟ್ರೀಯ ಹೆದ್ದಾರಿ ದಾಟಿ ಜಂಗಲ್ ರೆಸಾರ್ಟ್ ಮೂಲಕ ಕಾಡಿಗೆ ಕರೆದುಕೊಂಡು ಹೋಗಲಾಗುತ್ತಿದ್ದು. ಈ ಸಂದರ್ಭ ಕಾವಾಡಿಗ ಕಲೀಲ್ ತಮ್ಮ ದ್ವಿಚಕ್ರವಾಹನದ ಮೂಲಕ ಹಿಂಬಾಲಿಸುತ್ತಿದ್ದರು. ಈ ಸಂದರ್ಭದಲ್ಲಿ ಕಾವಾಡಿಗನನ್ನು ಕಂಡು ಇದ್ದಕ್ಕಿದ್ದಂತೆ ಆನೆ ಕೋಪಗೊಂಡಿದೆ. ಮಣಿಕಂಠನ ಮೇಲೆ ಮಾವುತ ಇಮ್ರಾನ್ ಕುಳಿತಿದ್ದರುಕೂಡ ಕಲೀಲ್ ಬರುತ್ತಿದ್ದಂತೆ ಆತನ ಮೇಲೆ ಮಣಿಕಂಠ ದಾಳಿಗೆ ಮುಂದಾಗಿದ್ದಾನೆ. ಆನೆಯ ಮುನಿಸಿನ ಬಗ್ಗೆ ತಿಳಿದ ಕಲೀಲ್ ಬೈಕ್ ಬಿಟ್ಟು ಅಲ್ಲಿಂದಲೇ ಓಡಿ ಹೋಗಿ ಬಚಾವ್ ಆಗಿದ್ದಾರೆ.


ಮಣಿಕಂಠ ಆನೆಯು ಕಲೀಲ್ ಅವರನ್ನು ಓಡಿಸಿಕೊಂಡು ಮತ್ತೆ ಬಿಡಾರದೊಳಗೆ ಓಡಿದೆ. ನಂತರ ಬಿಡಾರದಲ್ಲಿ ಅರಿವಳಿಕೆ ಮದ್ದು ನೀಡಲಾಯಿತು. ಆ ಬಳಿಕ ಇತರೆ ಆನೆಗಳ ಸಹಾಯದಿಂದ ಮಣಿಕಂಠನನ್ನು ನಿಯಂತ್ರಣಕ್ಕೆ ತಂದು ಕಟ್ಟಿ ಹಾಕಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *