Connect with us

    DAKSHINA KANNADA

    ಆನೆಯ ಘೀಳಿಗೆ ಹೆದರಿ ಓಡಿದ ಕಾರ್ಮಿಕ ಬಿದ್ದು ಸಾವು

    ಮೂಡುಬಿದಿರೆ, ಸೆಪ್ಟೆಂಬರ್ 07: ಆನೆಗೆ ಆಹಾರ ವಸ್ತು ಕೊಡುವ ವೇಳೆ ಯಾವುದೋ ಸಿಟ್ಟಿನಲ್ಲಿ ಆನೆ ಘೀಳಿಟ್ಟಿದ್ದರಿಂದ ಹೆದರಿ ಓಡಿದ ದೇವಸ್ಥಾನದ ಕೂಲಿ ಕಾರ್ಮಿಕ ಕಲ್ಲು ಹಾಸಿನ ನೆಲದಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದ ಹೊರ ಆವರಣದಲ್ಲಿ ಸೆಪ್ಟೆಂಬರ್ 06 ರ ಸೋಮವಾರ ನಡೆದಿದೆ.

    ಆನೆಯ ಮಾವುತ ಹುರುಳಿ ತರಲು ಹೋಗಿದ್ದ ಸಂದರ್ಭ ದೇವಸ್ಥಾನದ ಇನ್ನೊಬ್ಬ ಕೂಲಿ ಕಾರ್ಮಿಕ ಕಾರ್ಕಳ ಕೈಗಾರಿಕಾ ಪ್ರಾಂಗಣದ ಬಳಿಯ ನಿವಾಸಿ ವಿಶ್ವನಾಥ ದೇವಾಡಿಗ(58) ಆನೆಯ ಬಳಿ ಹೋಗಿದ್ದಾಗ ಯಾವುದೋ ಸಿಟ್ಟಿನಲ್ಲಿ ಆನೆ ಜೋರಾಗಿ ಘೀಳಿಟ್ಟಿತ್ತು.

    ಇದರಿಂದ ಹೆದರಿದ ಅವರು ಓಡುವ ಭರದಲ್ಲಿ ಕಲ್ಲು ಹಾಸಿದ ನೆಲಕ್ಕೆ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು. ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಮೃತರ ಸಹೋದರಿ ಸುನಂದಾ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply