Connect with us

DAKSHINA KANNADA

ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಚಕ್ರವರ್ತಿ ಸೂಲಿಬೆಲೆ ಕರೆ

ಮಂಗಳೂರು, ಮಾರ್ಚ್​ 10: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು.

ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ  ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್​ಪಿ  ಹಮ್ಮಿಕೊಂಡಿದ್ದ ‘‘ಕೊರಗಜ್ಜನ‌ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಎಲ್ಲಿಯ ವರೆಗೂ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಿರೋಣ? ಸ್ವಲ್ಪ ಬದಲಾವಣೆ ತರೋಣ. ನಮ್ಮ ಗಂಡು ಮಕ್ಕಳಿಗೂ ಈ ಬಗ್ಗೆ ಹೇಳಬೇಕು ಎಂದರು.

ಎಷ್ಟು ದಿನ ಅಂತ ನಮ್ಮದೇ ಹೆಣ್ಣುಮಕ್ಕಳನ್ನು ನೋಡುತ್ತೀರಾ? ಹುಡುಗಿ ಸಿಗಲಿಲ್ಲ, ಹುಡುಗಿ ಸಿಗಲಿಲ್ಲ ಎಂದು ಎಷ್ಟು ದಿನ ಅಂತ ಹೇಳೋಣ. ಸ್ವಲ್ಪ ಬೇರೆಯವರನ್ನು ನೋಡಿ ಅಲ್ವಾ. ನಮ್ಮ ಸಮಾಜದಲ್ಲಿ ನಾವು ನಮ್ಮ ಸಮಾಜದ ಗಂಡು ಮಕ್ಕಳಿಗೆ ಹೆಣ್ಣು ಸಿಕ್ಕಿಲ್ಲವೆಂದು ಆಲೋಚನೆ ಮಾಡುತ್ತಿರುವಾಗ, ಪಕ್ಕದ ಸಮಾಜದಲ್ಲೂ ಸಮಸ್ಯೆಗಳು ಇದೆ ಅಲ್ವಾ? ಧೈರ್ಯ ತುಂಬಿ ಅಲ್ವಾ ಎಂದು ಸೂಲಿಬೆಲೆ ಹೇಳಿದರು.

ಆರಂಭದಲ್ಲಿ ನಮ್ಮ (ಹಿಂದೂ) ಹೆಣ್ಣುಮಕ್ಕಳನ್ನು ಲವ್ ಜಿಹಾದ್ ಮೂಲಕ ಮದುವೆಯಾಗುತ್ತಿದ್ದರು. ಮತಾಂತರ ಮಾಡುತ್ತಿದ್ದರು. ಈಗ ಹಿಂದೂ ಯುವತಿಯರು ಎಚ್ಚೆತ್ತುಕೊಂಡಿದ್ದಾರೆ. ಹಾಗಾಗಿ, ಹೆಸರನ್ನೇ ಬದಲಾಯಿಸಿ ಹಿಂದೂ ಹೆಸರು ಇಟ್ಟುಕೊಂಡು ಪ್ರೀತಿಯ ನಾಟಕವಾಗಿ ಮತಾಂತರ ಮಾಡುತ್ತಿದ್ದಾರೆ ಎಂದು ಸೂಲಿಬೆಲೆ ಆರೋಪಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *