LATEST NEWS
ನಗದು ಚಿನ್ನಾಭರಣಗಳೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ
ಮಂಗಳೂರು ಸೆಪ್ಟೆಂಬರ್ 08: ಮದುವೆಯ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬಳು ಮನೆಯಲ್ಲಿದ್ದ ಚಿನ್ನ ಹಾಗೂ ನಗದುಗಳೊಂದಿಗೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ ತಾಯಿ ಯಶೋಧಾ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್ಮೆಂಟ್ವೊಂದರಲ್ಲಿ ವಾಚ್ಮನ್ ಆಗಿರುವ ಯಶೋಧಾ ಎಂಬವರ ಪುತ್ರಿ ರೇಷ್ಮಾ ( 21) ಅವರ ನಿಶ್ಚಿತಾರ್ಥ ಆಗಸ್ಟ್ 21 ರಂದು ನಡೆದಿತ್ತು. ಈ ಸಂದರ್ಭ ಗಂಡಿನ ಮನೆಯವರು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ, 50 ಸಾವಿರ ರೂಪಾಯಿ ಮೌಲ್ಯದ ಉಂಗುರ, 60 ಸಾವಿರ ರೂಪಾಯಿ ಮೌಲ್ಯದ ಕಿವಿಯೋಲೆ, ಕಾಲು ಗೆಜ್ಜೆ ನೀಡಿದ್ದು, ಇವುಗಳನ್ನೆಲ್ಲಾ ಈಕೆ ತೆಗೆದುಕೊಂಡು ಹೋಗಿದ್ದಾಳೆ.
ಕೂಲಿ ಕೆಲಸ ಮಾಡಿ ಬ್ಯಾಂಕ್ ಖಾತೆಯಲ್ಲಿ ಉಳಿತಾಯ ಮಾಡಿದ್ದ 90 ಸಾವಿರ ರೂಪಾಯಿಯನ್ನು ಅಕ್ಬರ್ ಅಲಿ ಎಂಬವರ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ ಎಂದು ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ..
You must be logged in to post a comment Login