Connect with us

    LATEST NEWS

    ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಇಂಜಿನಿಯರಿಂಗ್ ವಿಧ್ಯಾರ್ಥಿ

    ಮಂಗಳೂರು ಡಿಸೆಂಬರ್ 26: ಶೈಕ್ಷಣಿಕ ಸಾಲಕ್ಕೆ ಹೆದರಿ ಇಂಜಿನಿಯರಿಂಗ್ ವಿಧ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.


    ಮೃತ ವಿಧ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಸೌರವ್‌‌ (19) ಎಂದು ಗುರುತಿಸಲಾಗಿದೆ. ಈತ ಸುರತ್ಕಲ್‌‌‌ನ ಎನ್ಐಟಿಕೆಯಲ್ಲಿ ಇಂಜಿನಿಯರಿಂಗ್‌ ವಿಧ್ಯಾಭ್ಯಾಸ ಮಾಡುತ್ತಿದ್ದ, ಈತ ಆತ್ಮಹತ್ಯೆಗೂ ಮುನ್ನ ಡೆತ್‌ ನೋಟ್‌‌ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆಯ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದ ಎನ್ನಲಾಗಿದೆ.


    ಡೆತ್ ನೋಟ್ ನಲ್ಲಿ ನಾನು ಶಿಕ್ಷಣಕ್ಕಾಗಿ ಸಾಲಮಾಡಿಕೊಂಡಿದ್ದು, ಅಲ್ಲದೆ ನನ್ನ ಮೆದುಳಿನಲ್ಲಿ ಕೆಮಿಕಲ್‌‌‌ ರಿಯಾಕ್ಷನ್‌‌‌‌‌ ಆಗುತ್ತಿದೆ. ಸಾಲವನ್ನು ಆದಷ್ಟು ಬೇಗ ತಿರಿಸಿ ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಆತ ರೂಂನ ಬಾಗಿಲು ತೆರೆಯದ ಹಿನ್ನೆಲೆ 9.30ರ ರ ವೇಳೆಗೆ ಕಿಟಿಕಿಯಿಂದ ನೋಡಿದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನೆಯ ಬಗ್ಗೆ ಸುರತ್ಕಲ್‌‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    ಸೌರವ್‌ ಪೋಷಕರು ತುಂಬಾ ಬಡವವರು ಎಂದು ತಿಳಿದು ಬಂದಿದ್ದು, ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ನಮಗೆ ಬರುವುದಕ್ಕೆ ಆಗುವುದಿಲ್ಲ ಸುರತ್ಕಲ್‌ನಲ್ಲಿಯೇ ಅಂತ್ಯಕ್ರಿಯೆ ಮಾಡಿ ಎಂದು ತಿಳಿಸಿದ್ದಾರೆ. ಆದರೆ, ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಮೃತ ದೇಹವನ್ನು ಪಾಟ್ನಾಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದಾರೆ. ಮಗನ ಸಾವಿನ ಬಗ್ಗೆ ಪೋಷಕರು ಕೂಡ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ಸೌರವ್‌ ಎಸ್ಸೆಸ್ಸೆಲ್ಸಿ ಓದುತ್ತಿದ್ದಾಗ ಕೂಡ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಪೋಷಕರು ಮಾಹಿತಿ ನೀಡಿದ್ದಾರೆ. ಸುರತ್ಕಲ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply