LATEST NEWS
ಉಡುಪಿ : ತಮಿಳುನಾಡು ಪೊಲೀಸ್ ಅಧಿಕಾರಿ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರ ಬಂಧನ

ಉಡುಪಿ : ತಮಿಳುನಾಡು ಪೊಲೀಸ್ ಅಧಿಕಾರಿ ಗುಂಡಿಕ್ಕಿ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರ ಬಂಧನ
ಉಡುಪಿ ಜನವರಿ 14: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಶೂಟೌಟ್ ಮಾಡಿ ಪರಾರಿಯಾಗಿದ್ದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಮಂಗಳೂರು ಹಾಗೂ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶಂಕಿತ ಉಗ್ರರು ಪರಾರಿಯಾದ ನಂತರ ರಾಜ್ಯ ಗುಪ್ತಚರ ಇಲಾಖೆ ಇಬ್ಬರ ಬಂಧನಕ್ಕಾಗಿ ಬಲೆ ಬೀಸಿದ್ದರು. ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣ ಮಾಡಿ ಎರಡೂ ಜಿಲ್ಲೆಗಳಲ್ಲಿ ತೀವ್ರ ಶೋಧ ಕಾರ್ಯ ನಡೆಸಿದ್ದರು.
ಬಂಧಿತರನ್ನು ಅಬ್ದುಲ್ ಶಮೀಮ್ ಮತ್ತು ತೌಫಿಕ್ ವಿಲ್ಸನ್ ಎಂದು ಗುರುತಿಸಲಾಗಿದೆ. ಬಂಧಿತರು ತಮಿಳುನಾಡಿನ ಕೊಯಮತ್ತೂರಿನಿಂದ ತಪ್ಪಿಸಿಕೊಂಡಿದ್ದ ಭಯೋತ್ಪಾದಕರ ಜೊತೆ ನಂಟನ್ನು ಹೊಂದಿದ್ದವರು ಎಂದು ಹೇಳಲಾಗಿದ್ದು, ಇವರ ಬಂಧದನಕ್ಕೆ ಮೂರು ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ಈ ಶಂಕಿತ ಉಗ್ರರ ಜೊತೆ ನಂಟು ಹೊಂದಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಲಾಗಿದೆ. ಖಚಿತ ಮಾಹಿತಿಯನ್ನು ನೀಡಿದ್ದ ರಾಜ್ಯ ಗುಪ್ತಚರ ಇಲಾಖೆ, ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಜ.8ರ ರಾತ್ರಿ ತಮಿಳುನಾಡು ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್ಪೋಸ್ಟ್ನಲ್ಲಿ ಸ್ಪೆಷಲ್ ಸಬ್ ಇನ್ಸ್ಪೆಕ್ಟರ್ ವಿಲ್ಸನ್ ಅವರನ್ನು ಇಬ್ಬರು ಗುಂಡಿಟ್ಟು ಕೊಂದ ಈ ಇಬ್ಬರು ಶಂಕಿತ ಉಗ್ರರು ಪರಾರಿಯಾಗಿದ್ದರು. ತಮಿಳುನಾಡು ಕೇರಳ ಗಡಿಯ ಕಲಿಯಿಕ್ಕಾವಿಲ ಚೆಕ್ಪೋಸ್ಟ್ನಲ್ಲಿ ವಾಹನಗಳ ತೀವ್ರ ತಪಾಸಣೆಗೆ ಒಳಪಡಿಸಲಾಗಿತ್ತು. ಈ ಮಾರ್ಗದಲ್ಲಿ ಬಂದ ಮಹೀಂದ್ರ ಸ್ಕಾರ್ಪಿಯೋದಿಂದ ಇಳಿದ ಇಬ್ಬರು ಶಂಕಿತ ಉಗ್ರರು ಗುಂಡು ಹಾರಿಸಿ ವಿಲ್ಸನ್ ಅವರನ್ನು ಹತ್ಯೆಗೈದು ಪರಾರಿ ಆಗಿದ್ದರು.
ಈ ಹಿನ್ನಲೆಯಲ್ಲಿ ಕೇರಳ, ತಮಿಳುನಾಡು ಸೇರಿದಂತೆ ಕರ್ನಾಟಕ ಕೇರಳ ಗಡಿ ಭಾಗವಾದ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿತ್ತು.
ಇಂದು ಕೇರಳ ಹಾಗೂ ತಮಿಳುನಾಡಿನ ಪೊಲೀಸರ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಹಾಗೂ ಉಡುಪಿ ಪೊಲೀಸರು ಇಬ್ಬರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇವರ ಜೊತೆ ನಂಟು ಹೊಂದಿದ್ದ ಮತ್ತಿಬ್ಬರು ಕೂಡ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.