Connect with us

    KARNATAKA

    ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಕೆ.ಎಸ್ ಈಶ್ವರಪ್ಪ

    ಶಿವಮೊಗ್ಗ ಎಪ್ರಿಲ್ 11: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇದೀಗ ಬಿಜೆಪಿ ಪಕ್ಷದಲ್ಲಿ ಹಿರಿಯ ನಾಯಕರು ನಿವೃತ್ತಿ ತೆಗೆದುಕೊಳ್ಳುತ್ತಿದ್ದಾರೆ. ಮಾಜಿ ಮುಖ್ಯಮಂತ್ಪಿ ಬಿಎಸ್ ವೈ ಬೆನ್ನಲ್ಲೇ ಇದೀಗ ಈಶ್ವರಪ್ಪ ಕೂಡ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.


    ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.

    ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply